9:52 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ಮಂಗಳೂರು: ತ್ಯಾಜ್ಯ ವಿಲೇವಾರಿಯಲ್ಲೂ ಆಗಲಿ ವೆರಿ ಸ್ಮಾರ್ಟ್

31/10/2022, 23:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಯ ರೆಸಿಗೆ ನಿಂತಿರುವ ಮಂಗಳೂರು ನಗರದ ಅಲ್ಲಲ್ಲಿ ಕಸದ ರಾಶಿಗಳು ಕಂಡು ಬರುತ್ತಿದ್ದು, ಕಡಲ ನಗರಿಗೆ ಇದು ಕಪ್ಪುಚುಕ್ಕೆ ಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಮಕೃಷ್ಣ ಮಿಷನ್ ನವರು ಸ್ವಚ್ಚ ಮಂಗಳೂರು ಮಾಡಿದರೆ” , ಕಾರ್ಪೋರೇಶನ್ ನವರು ಅಸ್ವಚ್ಛ ಮಂಗಳೂರು ಅಂತಾರೆ ಎಂದು ಜನರು ಆಡಿಕೊಳ್ಳುತ್ತಾರೆ.

ಮಂಗಳೂರು ದಿನದಿಂದ ದಿನಕ್ಕೆ ಸ್ಮಾರ್ಟ್ ಆಗುತ್ತಿದೆ. ಆದರೆ ಕಸದ ಸಮಸ್ಯೆಗೆ ಮಾತ್ರ ಮುಕ್ತಿ ಇಲ್ಲ. ನಗರದ ವಿವಿ ಕಾಲೇಜಿನ ಆವರಣ ದ ಹೊರಗಿರುವ ಫುಟ್ ಭಾತ್ ನಲ್ಲಿ ಇತ್ತೀಚಿಗೆ ಕಸದ ರಾಶಿಯು ತುಂಬಿಕೊಂಡಿದ್ದು ಪಾದಚಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ವರ್ಷದ ಹಿಂದೆ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ನಗರದಾದ್ಯಂತ ಕಸ ಶುಚಿಗೊಳಿಸುವ ಕಾರ್ಯ ನಡೆದಿತ್ತು. ಇದೇ ವೇಳೆ ಆವರಣ ಗೋಡೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆ ಗಳು ಶುಚಿ ಗೊಳಿಸಿ,ಬಣ್ಣ ಬಳಿದು ನಗರಕ್ಕೆ ಮೆರುಗು ತಂದಿದ್ದರು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಬಿದ್ದಿರುವ ಕಸವನ್ನು ಪಾಲಿಕೆಯು ಶುಚಿಗೊಳಿಸದೆ ತನ್ನ ಆಲಾಸ್ಯ ತನವನ್ನು ತೋರಿಸಿದೆ.

ಕಸ ನಿರ್ವಹಣೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಪಾಲಿಕೆಗೆ ನಗರವನ್ನು ಅಂದ ಗೊಳಿಸಲು ಸಾಧ್ಯವಾಗಿಲ್ಲ. ಆದರೆ ಸಂಘ ಸಂಸ್ಥೆಗಳು ಶುಚಿಗೊಳಿಸಿ ಕೊಟ್ಟಿದ್ದನ್ನು ನಿರ್ವಹಿಸಲಾಗದೆ ಕುಂಭ ಕರ್ಣನಂತೆ ಗೊರಕೆಗೆ ಜಾರಿದ್ದು, ತಿಂಗಳ ಹಿಂದೆ ಗಾಂಧೀ ಜಯಂತಿಯಂದು ಪೊರಕೆ ಹಿಡಿದು ಫೋಟೋಗೆ ಪೋಸು ಕೊಟ್ಟವರು, ಚುನಾವಣೆ ಸಮೀಪಿಸುತ್ತಿದಂತೆ ಒಬ್ಬರ ಮೇಲೆ ಮತ್ತೊಬ್ಬರು ಕೆಸರೆರಚುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು