9:32 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು

03/05/2021, 22:30

ಬೆಂಗಳೂರು(Reporter Karnataka)

ಕೋವಿಡ್‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇತೃತ್ವದಲ್ಲಿ ವ್ಯವಸ್ಥೆ ಮಾಡಿರುತ್ತಾರೆ ಎನ್ನುವ ಬ್ಯಾನರ್ ಸೋಶಿಯಲ್ ಮೀಡಿಯಾದಲ್ಲಿ ಇವತ್ತು ಸಖತ್ ವೈರಲ್ ಆಗಿತ್ತು.

ಸಾವಿನಲ್ಲೂ ಪ್ರಚಾರ ಮಾಡುವ ಹಂಗು ಯಾಕೆ ಎಂದು ಟ್ರೋಲ್ ಮಾಡುವ ಮೂಲಕ ಬೇಕಾಬಿಟ್ಟಿ ರಾಜಕೀಯ ಫುಡಾರಿಗಳ ನಿದ್ದೆಗೆಡಿಸಿದ್ದಾರೆ. ರಾಜ್ಯವ್ಯಾಪಿ ಈ ಬ್ಯಾನರ್ ಕುರಿತು ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಆಕ್ರೋಶಕ್ಕೆ ಮಣಿದು ಈಗ ಬ್ಯಾನರನ್ನು ತೆರವುಗೊಳಿಸಿದ್ದಾರೆ.
ಒಟ್ಟಿನಲ್ಲಿ ಪ್ರಚಾರ ತೆವಲು ಯಾವ ರೀತಿಯ ಮುಖಭಂಗಕ್ಕೆ ಕಾರಣವಾಗುತ್ತದೆ ಎನ್ನುವುದಕ್ಕೆ ಇದೊಂದು ಸಣ್ಣ ದೃಷ್ಟಾಂತವಾಗಬಹುದು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಆರ್.ಅಶೋಕ ಅವರ ಫೋಟೊ ಕೂಡ ಈ ಫ್ಲೆಕ್ಸಲ್ಲಿ ಬಳಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು