10:43 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು

03/05/2021, 22:30

ಬೆಂಗಳೂರು(Reporter Karnataka)

ಕೋವಿಡ್‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇತೃತ್ವದಲ್ಲಿ ವ್ಯವಸ್ಥೆ ಮಾಡಿರುತ್ತಾರೆ ಎನ್ನುವ ಬ್ಯಾನರ್ ಸೋಶಿಯಲ್ ಮೀಡಿಯಾದಲ್ಲಿ ಇವತ್ತು ಸಖತ್ ವೈರಲ್ ಆಗಿತ್ತು.

ಸಾವಿನಲ್ಲೂ ಪ್ರಚಾರ ಮಾಡುವ ಹಂಗು ಯಾಕೆ ಎಂದು ಟ್ರೋಲ್ ಮಾಡುವ ಮೂಲಕ ಬೇಕಾಬಿಟ್ಟಿ ರಾಜಕೀಯ ಫುಡಾರಿಗಳ ನಿದ್ದೆಗೆಡಿಸಿದ್ದಾರೆ. ರಾಜ್ಯವ್ಯಾಪಿ ಈ ಬ್ಯಾನರ್ ಕುರಿತು ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಆಕ್ರೋಶಕ್ಕೆ ಮಣಿದು ಈಗ ಬ್ಯಾನರನ್ನು ತೆರವುಗೊಳಿಸಿದ್ದಾರೆ.
ಒಟ್ಟಿನಲ್ಲಿ ಪ್ರಚಾರ ತೆವಲು ಯಾವ ರೀತಿಯ ಮುಖಭಂಗಕ್ಕೆ ಕಾರಣವಾಗುತ್ತದೆ ಎನ್ನುವುದಕ್ಕೆ ಇದೊಂದು ಸಣ್ಣ ದೃಷ್ಟಾಂತವಾಗಬಹುದು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಆರ್.ಅಶೋಕ ಅವರ ಫೋಟೊ ಕೂಡ ಈ ಫ್ಲೆಕ್ಸಲ್ಲಿ ಬಳಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು