ಇತ್ತೀಚಿನ ಸುದ್ದಿ
ಸ್ಮೃತಿ ಇರಾನಿ ಕಾಸರಗೋಡು ಭೇಟಿ: ಕಾಞಂಗಾಡ್ನಲ್ಲಿ ಸಾರ್ವಜನಿಕ ಸಭೆ, ವಯನಾಡಿನಲ್ಲಿ ರೋಡ್ ಶೋ; ಮಂಗಳೂರು ಏರ್ ಪೋರ್ಟ್ ನಿಂದ ಬೆಂಗಳೂರಿಗೆ
05/04/2024, 18:31
ಕಾಸರಗೋಡು(reporterkarnataka.com): ಜನರನ್ನು ಲೂಟಿ ಮಾಡಲು I.N.D.I.A ಮೈತ್ರಿಕೂಟ ರಚಿಸಲಾಗಿದೆ. ಕಾಂಗ್ರೆಸ್ ಪಕ್ಷವು ಎಸ್ಡಿಪಿಐ, ರಾಜಕೀಯ ಘಟಕದ ಬೆಂಬಲವಿಲ್ಲದೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿ ಎಂದು ಕೇಂದ್ರ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಸವಾಲು ಹಾಕಿದರು. ಕೇರಳದ ಕಾಸರಗೋಡಿಗೆ ಭೇಟಿ ನೀಡಿದ ಅವರು ಎನ್ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಅವರನ್ನು ಬೆಂಬಲಿಸಿ ಕಾಞಂಗಾಡ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ರಾಜ್ಯದಲ್ಲಿ ಕಾಂಗ್ರೆಸ್, ಸಿಪಿಎಂ ಮತ್ತು ಸಿಪಿಐನ ಸ್ಥಳೀಯ ನಾಯಕರು ಹಲವಾರು ಕೋಟಿ ಸಾರ್ವಜನಿಕ ಹಣವನ್ನು ಕಬಳಿಸಿದ ಸಹಕಾರಿ ಬ್ಯಾಂಕ್ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿದರು.
ನರೇಂದ್ರ ಮೋದಿ ಅವರ ಸರ್ಕಾರವು ದೇಶದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅದನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಅವರು ನುಡಿದರು.
ಇದಕ್ಕೆ ಮುನ್ನ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಕಾಸರಗೋಡಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಂಗಳೂರು ನಗರಕ್ಕೆ ಆಗಮಿಸಿದೇ ನೇರವಾಗಿ ಬೆಂಗಳೂರಿಗೆ ತೆರಳಿದರು.














