5:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸ್ಮೃತಿ ಇರಾನಿ ಕಾಸರಗೋಡು ಭೇಟಿ: ಕಾಞಂಗಾಡ್‌ನಲ್ಲಿ ಸಾರ್ವಜನಿಕ ಸಭೆ, ವಯನಾಡಿನಲ್ಲಿ ರೋಡ್ ಶೋ; ಮಂಗಳೂರು ಏರ್ ಪೋರ್ಟ್ ನಿಂದ ಬೆಂಗಳೂರಿಗೆ

05/04/2024, 18:31

ಕಾಸರಗೋಡು(reporterkarnataka.com): ಜನರನ್ನು ಲೂಟಿ ಮಾಡಲು I.N.D.I.A ಮೈತ್ರಿಕೂಟ ರಚಿಸಲಾಗಿದೆ. ಕಾಂಗ್ರೆಸ್ ಪಕ್ಷವು ಎಸ್‌ಡಿಪಿಐ, ರಾಜಕೀಯ ಘಟಕದ ಬೆಂಬಲವಿಲ್ಲದೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿ ಎಂದು ಕೇಂದ್ರ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಸವಾಲು ಹಾಕಿದರು. ಕೇರಳದ ಕಾಸರಗೋಡಿಗೆ ಭೇಟಿ ನೀಡಿದ ಅವರು ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಅವರನ್ನು ಬೆಂಬಲಿಸಿ ಕಾಞಂಗಾಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ರಾಜ್ಯದಲ್ಲಿ ಕಾಂಗ್ರೆಸ್, ಸಿಪಿಎಂ ಮತ್ತು ಸಿಪಿಐನ ಸ್ಥಳೀಯ ನಾಯಕರು ಹಲವಾರು ಕೋಟಿ ಸಾರ್ವಜನಿಕ ಹಣವನ್ನು ಕಬಳಿಸಿದ ಸಹಕಾರಿ ಬ್ಯಾಂಕ್ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿದರು.
ನರೇಂದ್ರ ಮೋದಿ ಅವರ ಸರ್ಕಾರವು ದೇಶದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅದನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಅವರು ನುಡಿದರು.
ಇದಕ್ಕೆ ಮುನ್ನ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಕಾಸರಗೋಡಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಂಗಳೂರು ನಗರಕ್ಕೆ ಆಗಮಿಸಿದೇ ನೇರವಾಗಿ ಬೆಂಗಳೂರಿಗೆ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು