12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

25/12/2024, 23:54

ಬೆಂಗಳೂರು(reporterkarnataka.com): ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ರೈಲು ಸಂಖ್ಯೆ 06520 ಕಲಬುರಗಿ – ಎಸ್ ಎಂ ವಿ ಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ಗಳಲ್ಲಿ ನಿಲುಗಡೆ ಇರಲಿದೆ.
ಈ ವಿಶೇಷ ರೈಲು ಮೂರು ಎಸಿ ತ್ರಿ ಟೈರ್ ಬೋಗಿಗಳು, ಮೂರು ದ್ವಿತೀಯ ದರ್ಜೆ ಸ್ಲೀಪರ್ ಕ್ಲಾಸ್ ಬೋಗಿಗಳು, ಒಂಬತ್ತು ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ) ಬೋಗಿಗಳನ್ನು ಹೊಂದಿರಲಿದೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು