2:54 PM Saturday16 - August 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.…

ಇತ್ತೀಚಿನ ಸುದ್ದಿ

ಸ್ನೇಹಾಲಯದಲ್ಲಿ ಮೊಹರಂ ಉಡುಗೊರೆ: 6 ವರ್ಷಗಳ ನಂತರ ಹೃದಯ ಸ್ಪರ್ಶಿ ಪುನರ್ಮಿಲನ

20/07/2024, 16:05

ಮಂಗಳೂರು(reporterkarnataka.com):ಜುಲೈ 18, 2024 ರಂದು ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರವು ಒಂದು ಹೃದಯ ಸ್ಪರ್ಶಿಸುವ ಪುನರ್ಮಿಲನವನ್ನು ಆಚರಿಸಿತು. ನವೆಂಬರ್ 9, 2019 ರಂದು ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಿಂದ ಮಾನಸಿಕ ಅಸ್ವಸ್ಥ ಯುವಕನನ್ನು ಕೇಂದ್ರವು ರಕ್ಷಿಸಿ ಸ್ನೇಹಾಲಯದಲ್ಲಿ ಸೇರಿಸಲಾಗಿತ್ತು. ದಾಖಲಾತಿಯ ಸಮಯದಲ್ಲಿ ಆತನ ಮಾನಸಿಕವಾಗಿ ಅತೀ ರೇಗಾಟದ ಸ್ಥಿತಿಯಲ್ಲಿ ಇದ್ದುದರಿಂದ ಅವನ ಗುರುತನ್ನು ತಿಳಿಯಲು ಸಾಧ್ಯವಾಗದೆ, ಅವನಿಗೆ ಬಬ್ಲು ಎಂದು ಹೆಸರಿಸಲಾಯಿತು. ಸ್ನೇಹಾಲಯದಲ್ಲಿ ಆತನಿಗೆ ಉತ್ತಮ ಆರೈಕೆಯನ್ನು ನೀಡಲಾಯಿತು.
ಅಧಿಕೃತ ದಾಖಲೆಗಳನ್ನು ಪಡೆಯುವ ಪ್ರಯತ್ನದಲ್ಲಿ, ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ಕಾರ್ಡ್‌ಗಾಗಿ ಬಬ್ಲು ಅವರ ಅರ್ಜಿಯನ್ನು ಸಲ್ಲಿಸಿದಾಗ ಆರಂಭದಲ್ಲಿ ಆಧಾರ್ ಸೇವಾ ಕೇಂದ್ರವು ಅದನ್ನು ತಿರಸ್ಕರಿಸಿತು. ಆದಾಗ್ಯೂ, ಸ್ವಲ್ಪ ಸಮಯದ ನಂತರ ಅವರ ಹಳೆಯ ಆಧಾರ್ ವಿವರಗಳನ್ನು ಪರಿಶೀಲಿಸಿದಾಗ ಬಬ್ಲೂ ರವರ ನಿಜವಾದ ಗುರುತು ವಿವರಗಳನ್ನು ಪಡೆಯಲು ಸಾಧ್ಯವಾಯಿತು. ಅವರ ನಿಜವಾದ ಹೆಸರು ದಾವಲ್ಸಾಬ್ ದಾರುಬಾಯಿ ಎಂಬ ಮಾಹಿತಿ ದೊರಕಿತು. ಆಧಾರ್ ಕಾರ್ಡ್‌ನಲ್ಲಿರುವ ಸಂಪರ್ಕ ಸಂಖ್ಯೆ ಬ್ಲಾಕ್ ಆಗಿದ್ದರೂ ಹುಬ್ಬಳ್ಳಿ ಠಾಣೆ ಪೊಲೀಸರು ಆತನ ತಂದೆಯ ಸಂಪರ್ಕ ಸಂಖ್ಯೆ ಪಡೆಯಲು ಸಹಕರಿಸಿದರು ಹಾಗೂ ಆತನ ವಿಳಾಸವನ್ನು ಪತ್ತೆ ಹಚ್ಚಲು ಸಾಧ್ಯವಾಯಿತು.

6 ವರ್ಷಗಳಿಂದ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದ ದಾವಲ್ಸಾಬ್‌ನ ಕುಟುಂಬವನ್ನು ಸಂಪರ್ಕಿಸಿದಾಗ, ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. ವೀಡಿಯೊ ಕರೆಯು ಅವರ ಗುರುತನ್ನು ದೃಢಪಡಿಸಿತು ಹಾಗೂ ಪುಣ್ಯ ಮೊಹರಂ ದಿನದಂದು ಈ ಪ್ರಕ್ರಿಯೆ ಒಂದು ಭಾವನಾತ್ಮಕ ಪುನರ್ಮಿಲನಕ್ಕೆ ಕಾರಣವಾಯಿತು. ದಾವಲಸಾಬ್ ಅವರ ಪೋಷಕರು ಸ್ನೇಹಾಲಯ ತಂಡದ ಅವರ ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆಗೆ ಅಪಾರ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.
ಈ ಕಥೆಯು ಸಹಾನುಭೂತಿ ಮತ್ತು ಪರಿಶ್ರಮದ ಪ್ರಭಾವವನ್ನು ಎತ್ತಿ ತೋರಿಸುತ್ತದೆ. ಸ್ನೇಹಾಲಯದ ಪ್ರಯತ್ನಗಳು ಕಳೆದುಹೋದ ಮಗನನ್ನು ಅವನ ಕುಟುಂಬಕ್ಕೆ ಹಿಂದಿರುಗಿಸುತ್ತದೆ, ಸಮಾಜಕ್ಕೆ ಸೇವೆ ಸಲ್ಲಿಸುವ ಅವರ ಬದ್ಧತೆಯನ್ನು ಸಾಕಾರಗೊಳಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು