12:51 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಸ್ನೇಹಾಲಯದಲ್ಲಿ ಮೊಹರಂ ಉಡುಗೊರೆ: 6 ವರ್ಷಗಳ ನಂತರ ಹೃದಯ ಸ್ಪರ್ಶಿ ಪುನರ್ಮಿಲನ

20/07/2024, 16:05

ಮಂಗಳೂರು(reporterkarnataka.com):ಜುಲೈ 18, 2024 ರಂದು ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರವು ಒಂದು ಹೃದಯ ಸ್ಪರ್ಶಿಸುವ ಪುನರ್ಮಿಲನವನ್ನು ಆಚರಿಸಿತು. ನವೆಂಬರ್ 9, 2019 ರಂದು ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಿಂದ ಮಾನಸಿಕ ಅಸ್ವಸ್ಥ ಯುವಕನನ್ನು ಕೇಂದ್ರವು ರಕ್ಷಿಸಿ ಸ್ನೇಹಾಲಯದಲ್ಲಿ ಸೇರಿಸಲಾಗಿತ್ತು. ದಾಖಲಾತಿಯ ಸಮಯದಲ್ಲಿ ಆತನ ಮಾನಸಿಕವಾಗಿ ಅತೀ ರೇಗಾಟದ ಸ್ಥಿತಿಯಲ್ಲಿ ಇದ್ದುದರಿಂದ ಅವನ ಗುರುತನ್ನು ತಿಳಿಯಲು ಸಾಧ್ಯವಾಗದೆ, ಅವನಿಗೆ ಬಬ್ಲು ಎಂದು ಹೆಸರಿಸಲಾಯಿತು. ಸ್ನೇಹಾಲಯದಲ್ಲಿ ಆತನಿಗೆ ಉತ್ತಮ ಆರೈಕೆಯನ್ನು ನೀಡಲಾಯಿತು.
ಅಧಿಕೃತ ದಾಖಲೆಗಳನ್ನು ಪಡೆಯುವ ಪ್ರಯತ್ನದಲ್ಲಿ, ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ಕಾರ್ಡ್‌ಗಾಗಿ ಬಬ್ಲು ಅವರ ಅರ್ಜಿಯನ್ನು ಸಲ್ಲಿಸಿದಾಗ ಆರಂಭದಲ್ಲಿ ಆಧಾರ್ ಸೇವಾ ಕೇಂದ್ರವು ಅದನ್ನು ತಿರಸ್ಕರಿಸಿತು. ಆದಾಗ್ಯೂ, ಸ್ವಲ್ಪ ಸಮಯದ ನಂತರ ಅವರ ಹಳೆಯ ಆಧಾರ್ ವಿವರಗಳನ್ನು ಪರಿಶೀಲಿಸಿದಾಗ ಬಬ್ಲೂ ರವರ ನಿಜವಾದ ಗುರುತು ವಿವರಗಳನ್ನು ಪಡೆಯಲು ಸಾಧ್ಯವಾಯಿತು. ಅವರ ನಿಜವಾದ ಹೆಸರು ದಾವಲ್ಸಾಬ್ ದಾರುಬಾಯಿ ಎಂಬ ಮಾಹಿತಿ ದೊರಕಿತು. ಆಧಾರ್ ಕಾರ್ಡ್‌ನಲ್ಲಿರುವ ಸಂಪರ್ಕ ಸಂಖ್ಯೆ ಬ್ಲಾಕ್ ಆಗಿದ್ದರೂ ಹುಬ್ಬಳ್ಳಿ ಠಾಣೆ ಪೊಲೀಸರು ಆತನ ತಂದೆಯ ಸಂಪರ್ಕ ಸಂಖ್ಯೆ ಪಡೆಯಲು ಸಹಕರಿಸಿದರು ಹಾಗೂ ಆತನ ವಿಳಾಸವನ್ನು ಪತ್ತೆ ಹಚ್ಚಲು ಸಾಧ್ಯವಾಯಿತು.

6 ವರ್ಷಗಳಿಂದ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದ ದಾವಲ್ಸಾಬ್‌ನ ಕುಟುಂಬವನ್ನು ಸಂಪರ್ಕಿಸಿದಾಗ, ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. ವೀಡಿಯೊ ಕರೆಯು ಅವರ ಗುರುತನ್ನು ದೃಢಪಡಿಸಿತು ಹಾಗೂ ಪುಣ್ಯ ಮೊಹರಂ ದಿನದಂದು ಈ ಪ್ರಕ್ರಿಯೆ ಒಂದು ಭಾವನಾತ್ಮಕ ಪುನರ್ಮಿಲನಕ್ಕೆ ಕಾರಣವಾಯಿತು. ದಾವಲಸಾಬ್ ಅವರ ಪೋಷಕರು ಸ್ನೇಹಾಲಯ ತಂಡದ ಅವರ ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆಗೆ ಅಪಾರ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.
ಈ ಕಥೆಯು ಸಹಾನುಭೂತಿ ಮತ್ತು ಪರಿಶ್ರಮದ ಪ್ರಭಾವವನ್ನು ಎತ್ತಿ ತೋರಿಸುತ್ತದೆ. ಸ್ನೇಹಾಲಯದ ಪ್ರಯತ್ನಗಳು ಕಳೆದುಹೋದ ಮಗನನ್ನು ಅವನ ಕುಟುಂಬಕ್ಕೆ ಹಿಂದಿರುಗಿಸುತ್ತದೆ, ಸಮಾಜಕ್ಕೆ ಸೇವೆ ಸಲ್ಲಿಸುವ ಅವರ ಬದ್ಧತೆಯನ್ನು ಸಾಕಾರಗೊಳಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು