2:28 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶೋಭಾ ಕರಂದ್ಲಾಜೆಯ ಹುಡುಕಿ ಸೆಲ್ಪಿ ತೆಗೆದು ಕಳುಹಿಸಿದರೆ ಬಹುಮಾನ:  ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ

28/09/2022, 14:12

ಉಡುಪಿ(reporterkarnataka.com): ಒಂದು ವಾರದಲ್ಲಿ ಉಡುಪಿ, ಕಾಪು ಅಥವಾ ಬ್ರಹ್ಮಾವರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಾರಿಗಾದರೂ ಸಿಕ್ಕರೆ ಅವರ ಜತೆ ಫೋಟೋ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿದರೆ, ಮೊದಲ 5 ಮಂದಿ

ವಿಜೇತರಿಗೆ 5000 ರೂಪಾಯಿ ಬಹುಮಾನ ನೀಡಲಾಗುವುದು ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸವಾಲು ಹಾಕಿದ್ದಾರೆ.

ಮಲ್ಪೆ ಕರಾವಳಿ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಉಡುಪಿ

ಕಲ್ಮಾಡಿ ಚರ್ಚ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ವೇಳೆ ಅವರು ಮಾತನಾಡಿದರು.

ಕರಾವಳಿ ಬೈಪಾಸ್ ವರೆಗೆ ಪಾದಯಾತ್ರೆ ನಡೆಯಿತು.

ಜಿಲ್ಲೆಯಲ್ಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಯಾವುದೇ ಕೆಲಸ ಕಾರ್ಯಗಳು ಮಾಡುತ್ತಿಲ್ಲ.

ಎಂದ ಅವರು, ಬಿಜೆಪಿ ಸಂಸದೆ ಉಡುಪಿಗೆ ಬರುವುದೆ ಇಲ್ಲ ಎಂದು ಟೀಕಿಸಿದರು.

ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು. ಸಂಸದರನ್ನು ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು ಎಂದರು.

ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ. ರಾಜ್ಯ ಬಿಜೆಪಿ ಸರಕಾರ ನಿದ್ರೆಯ ಮಂಪರಿ ನಲ್ಲಿದೆ. ಗುತ್ತಿಗೆದಾರರು ರಘುಪತಿ ಭಟ್ ಹಾಗೂ ಶೋಭಾ ಕರಂದ್ಲಾಜೆಗೆ ಶೇ.40 ಕಮಿಷನ್ ಕೊಟ್ಟಿಲ್ಲ ಎಂದು ರಸ್ತೆ ದುರಸ್ತಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು