9:49 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಸೋಲಿಸುವ ತಂತ್ರ: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ವಿಜಯೇಂದ್ರಗೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ಮನವಿ

01/04/2023, 09:16

ಮೈಸೂರು(reporterkarnataka.com): 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.
ಕಳೆದ 2018ರ ವಿಧಾನ ಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರನ್ನು ಬಿಜೆಪಿ ಪಕ್ಷದ ವರಿಷ್ಠರು ಯಾವ ರೀತಿ ನಡೆಸಿ ಕೊಂಡಿದ್ದರು ಎಂಬುದನ್ನು ನಾವೆಲ್ಲರೂ ಸೂಕ್ಷ್ಮವಾಗಿ ಗಮನಿಸಿದ್ದೇವೆ. ರಾಜಕೀಯವಾಗಿ ಅತಿ ವೇಗವಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ದೊಡ್ಡ ಮಟ್ಟದ ಯಶಸ್ಸು ಕಂಡು ಬೆಳೆಯುತ್ತಿರುವ ವಿಜಯೇಂದ್ರ ಅವರ ಬೆಳವಾಣಿಗೆಯನ್ನು ಸಹಿಸದ ಕೆಲವರು ವಿಜಯೇಂದ್ರ ಅವರನ್ನು ವರುಣಾದಿಂದ ಚುನಾವಣೆಗೆ ನಿಲ್ಲಿಸಿ ರಾಜಕೀಯವಾಗಿ ಮುಗಿಸುವ ಸಂಚು ರೂಪಿಸಿದ್ದಾರೆ ಎಂಬ ಸಂಶಯ ಉಂಟಾಗುತ್ತಿದೆ.
ವರುಣಾ ವಿಧಾನಸಭಾ ಕ್ಷೇತ್ರ ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು ಸಿದ್ದರಾಮಯ್ಯವಿರುದ್ಧ ಗೆಲುವು ಸಾಧಿಸುವುದು ಅಷ್ಟು ಸುಲುಭವಲ್ಲ. ವಿಜಯೇಂದ್ರ ಅವರು ಮುಂದಿನ ರಾಜಕೀಯ ದೃಷ್ಟಿಯಿಂದ ಶಿಕಾರಿಪುರ ದಿಂದ ಸ್ಪರ್ಧಿಸುವುದು ಉತ್ತಮ ಎಂದು ತೇಜಸ್ವಿ ಅವರು ಮೈಸೂರಿನಲ್ಲಿ ಮನವಿ ಮಾಡಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು