8:45 PM Monday19 - May 2025
ಬ್ರೇಕಿಂಗ್ ನ್ಯೂಸ್
ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್

ಇತ್ತೀಚಿನ ಸುದ್ದಿ

ಸೋಮವಾರಪೇಟೆ: ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಗುಂಡೇಟಿಗೆ ಬಲಿ; ತನಿಖೆ ಆರಂಭ

30/08/2022, 09:58

ಮಡಿಕೇರಿ(reporterkarnataka.com):
ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಗುಂಡೇಟಿಗೆ ಬಲಿಯಾಗಿರುವ ಘಟನೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಡವಾರೆ ಗ್ರಾಮದ ಶಿವಕುಮಾರ್ ( 58 ) ಎಂಬವರೇ ಮೃತಪಟ್ಟರು. ಭಾನುವಾರ ಸಂಜೆ ತನ್ನ ನಾಲ್ಕು ಜನ ಸ್ನೇಹಿತರೊಡನೆ ಸೂಲಬ್ಬಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ ಅವರಿಗೆ ಬೆಳಗ್ಗೆ ಮಗ ಫೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ನಂತರ ಜೊತೆಯಲ್ಲಿದ್ದವರು ಕರೆ ಸ್ವೀಕರಿಸಿ ನಿಮ್ಮ ತಂದೆ ಬಿದ್ದು ಸ್ವಲ್ಪ ಏಟಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರೆನ್ನಲಾಗಿದೆ. ಸಂಜೆಯ ವೇಳೆಗೆ ಅವರಿಗೆ ಗುಂಡೇಟು ಬಿದ್ದಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಕುತ್ತಿಗೆ ಭಾಗಕ್ಕೆ ಗುಂಡೇಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬೇಟೆಗೆ ತೆರಳಿದ ಸಂದರ್ಭ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಸೋಮವಾರಪೇಟೆ ಶವಾಗಾರಕ್ಕೆ ತರಲಾಗಿದ್ದು ಡಿ.ವೈ.ಎಸ್.ಪಿ. ಗಂಗಾಧರಯ್ಯ ಮಾರ್ಗದರ್ಶನದಲ್ಲಿ ಸಬ್‌ಇನ್ಸೆಕ್ಟರ್ ರಮೇಶ್ ಕುಮಾರ್ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು