12:56 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸೋಮವಾರಪೇಟೆ: ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಗುಂಡೇಟಿಗೆ ಬಲಿ; ತನಿಖೆ ಆರಂಭ

30/08/2022, 09:58

ಮಡಿಕೇರಿ(reporterkarnataka.com):
ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಗುಂಡೇಟಿಗೆ ಬಲಿಯಾಗಿರುವ ಘಟನೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಡವಾರೆ ಗ್ರಾಮದ ಶಿವಕುಮಾರ್ ( 58 ) ಎಂಬವರೇ ಮೃತಪಟ್ಟರು. ಭಾನುವಾರ ಸಂಜೆ ತನ್ನ ನಾಲ್ಕು ಜನ ಸ್ನೇಹಿತರೊಡನೆ ಸೂಲಬ್ಬಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ ಅವರಿಗೆ ಬೆಳಗ್ಗೆ ಮಗ ಫೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ನಂತರ ಜೊತೆಯಲ್ಲಿದ್ದವರು ಕರೆ ಸ್ವೀಕರಿಸಿ ನಿಮ್ಮ ತಂದೆ ಬಿದ್ದು ಸ್ವಲ್ಪ ಏಟಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರೆನ್ನಲಾಗಿದೆ. ಸಂಜೆಯ ವೇಳೆಗೆ ಅವರಿಗೆ ಗುಂಡೇಟು ಬಿದ್ದಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಕುತ್ತಿಗೆ ಭಾಗಕ್ಕೆ ಗುಂಡೇಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬೇಟೆಗೆ ತೆರಳಿದ ಸಂದರ್ಭ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಸೋಮವಾರಪೇಟೆ ಶವಾಗಾರಕ್ಕೆ ತರಲಾಗಿದ್ದು ಡಿ.ವೈ.ಎಸ್.ಪಿ. ಗಂಗಾಧರಯ್ಯ ಮಾರ್ಗದರ್ಶನದಲ್ಲಿ ಸಬ್‌ಇನ್ಸೆಕ್ಟರ್ ರಮೇಶ್ ಕುಮಾರ್ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು