12:13 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸೋಮವಾರದಿಂದಲೇ ಪ್ರೌಢಶಾಲೆ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

11/02/2022, 08:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ತೆರೆಯುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲೇ ಸಭೆ ನಡೆಸಿದ ಸಿಎಂ ಸಿಎಂ ಬಸವರಾಜ ಬೊಮ್ಮಾಯಿ , ಸೋಮವಾರದಿಂದ ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹೈಕೋರ್ಟ್ ಶಾಲಾ ಕಾಲೇಜು ಆರಂಭಕ್ಕೆ ಸೂಚಿಸಿದ ಕಾರಣ ಸೋಮವಾರ ಮೊದಲ ಹಂತದಲ್ಲಿ 10 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ಪಿಯುಸಿ, ಡಿಗ್ರೀ ತರಗತಿ ಆರಂಭವಾಗಲಿದೆ ಎಂದರು.

ರಾಜ್ಯದಲ್ಲಿ ಉಂಟಾದ ಘರ್ಷಣೆಯಿಂದಾಗಿ ಸರ್ಕಾರ 3 ದಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು.ಇದೀಗ ಹೈಕೋರ್ಟ್​ ಶಿಕ್ಷಣ ಕೇಂದಗಳನ್ನು ಮುಚ್ಚದಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಪುನಾರಂಭಿಸಲಾಗುವುದು ಎಂದರು.

ಇನ್ನು ನಾಳೆ ಸಂಜೆ ಎಲ್ಲಾ ಸಚಿವರ, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗುವುದು. ಬಳಿಕ ಎಲ್ಲ ಶಾಲಾ – ಕಾಲೇಜು ಆರಂಭಿಸಲು ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು