8:52 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ

03/01/2024, 11:41

ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.


ಬ್ಯಾಂಕ್ ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ ಆರ್. ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ ಮಾಡಿ, ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಇದುವರೆಗೆ 3000ಕ್ಕೂ ಮಿಕ್ಕಿ ಗಿಡಗಳನ್ನು ಬ್ಯಾಂಕ್ ಆಫ್ ಬರೋಡಾ ವತಿಯಿಂದ ನೆಡಲಾಗಿದೆ.
ಮುಂದಿನ ಪೀಳಿಗೆಗೆ ಪರಿಸರ ರಕ್ಷಣೆ ಮಾಡಲು ಇಂಥ ಕಾರ್ಯಕ್ರಮ ಸಹಕಾರಿ, ಶಾಲಾ ವಿದ್ಯಾರ್ಥಿಗಳು ಹಣ್ಣಿನ ಗಿಡ ಸಂರಕ್ಷಣೆ ಮಾಡಿ ನಮ್ಮ ಮುಂದಿನ ಮಕ್ಕಳಿಗೆ ಹಣ್ಣು, ನೆರಳು ದೊರಕುವಂತೆ ಪರಿಸರ ರಕ್ಷಣೆ ಮಾಡಲು ಕರೆ ನೀಡಿದರು. ಜೊತೆಗೆ ಶಾಲಾ ವಿದ್ಯಾರ್ಥಿಗಳು BOB ಬ್ಯಾಂಕ್ ನಿಂದ BRO ಉಳಿತಾಯ ಖಾತೆ ತೆರೆದು ಮುಂದಿನ ದಿನಗಳಲ್ಲಿ ಶಿಕ್ಷಣ ಸಾಲ ಪಡೆದು ಹೆಚ್ಚಿನ ಪ್ರಗತಿ ಸಾಧಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳಾದ ಸತೀಶ್ ಪಾಠಕರ್, ಏಡ್ರಿಚ್ ಅಜಯ್ ಡಿಸೋಜಾ, ಸಂಜಯ್, ಸಚಿನ್ ಹೆಗ್ಡೆ, ಜೀವನ್ ಕೊಲ್ಯ, ಸಾರಸ್ವತ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಮಹೇಶ್ ಎಲ್. ಬೋಂಡಾಲ್, ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಕ್ರಂ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು