8:33 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ

03/01/2024, 11:41

ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.


ಬ್ಯಾಂಕ್ ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ ಆರ್. ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ ಮಾಡಿ, ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಇದುವರೆಗೆ 3000ಕ್ಕೂ ಮಿಕ್ಕಿ ಗಿಡಗಳನ್ನು ಬ್ಯಾಂಕ್ ಆಫ್ ಬರೋಡಾ ವತಿಯಿಂದ ನೆಡಲಾಗಿದೆ.
ಮುಂದಿನ ಪೀಳಿಗೆಗೆ ಪರಿಸರ ರಕ್ಷಣೆ ಮಾಡಲು ಇಂಥ ಕಾರ್ಯಕ್ರಮ ಸಹಕಾರಿ, ಶಾಲಾ ವಿದ್ಯಾರ್ಥಿಗಳು ಹಣ್ಣಿನ ಗಿಡ ಸಂರಕ್ಷಣೆ ಮಾಡಿ ನಮ್ಮ ಮುಂದಿನ ಮಕ್ಕಳಿಗೆ ಹಣ್ಣು, ನೆರಳು ದೊರಕುವಂತೆ ಪರಿಸರ ರಕ್ಷಣೆ ಮಾಡಲು ಕರೆ ನೀಡಿದರು. ಜೊತೆಗೆ ಶಾಲಾ ವಿದ್ಯಾರ್ಥಿಗಳು BOB ಬ್ಯಾಂಕ್ ನಿಂದ BRO ಉಳಿತಾಯ ಖಾತೆ ತೆರೆದು ಮುಂದಿನ ದಿನಗಳಲ್ಲಿ ಶಿಕ್ಷಣ ಸಾಲ ಪಡೆದು ಹೆಚ್ಚಿನ ಪ್ರಗತಿ ಸಾಧಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳಾದ ಸತೀಶ್ ಪಾಠಕರ್, ಏಡ್ರಿಚ್ ಅಜಯ್ ಡಿಸೋಜಾ, ಸಂಜಯ್, ಸಚಿನ್ ಹೆಗ್ಡೆ, ಜೀವನ್ ಕೊಲ್ಯ, ಸಾರಸ್ವತ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಮಹೇಶ್ ಎಲ್. ಬೋಂಡಾಲ್, ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಕ್ರಂ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು