6:18 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ; ಆರೋಪಿಗಳಲ್ಲಿ ಓರ್ವ ಅಪ್ರಾಪ್ತ ಬಾಲಕ!!

02/06/2023, 22:32

ಮಂಗಳೂರು(reporterkarnataka.com): ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 7ಕ್ಕೆ ಏರಿದೆ.
ಬಂಧಿತರನ್ನು ಯತೀಶ್, ಸಚಿನ್, ಸುಹಾನ್, ಭವಿಷ್, ಜೀತು, ಅಖಿಲ್ ಮತ್ತು ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಇವರಲ್ಲಿ ಯತೀಶ್, ಸಚಿನ್ ಹಾಗೂ ಸುಹಾನ್ ಪ್ರಮುಖ 3 ಮಂದಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಗರದ ಹೊರವಲಯದ ಉಳ್ಳಾಲ ಸೋಮೇಶ್ವರ ಬೀಚ್ ಗೆ ಬಂದಿದ್ದ ಮಂಗಳೂರಿನ ಖಾಸಗಿ ಅರೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಮೂವರು
ವಿದ್ಯಾರ್ಥಿನಿಯ ಜತೆ ಈ ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಗಳು ಗುರುವಾರ ಸಂಜೆ ಬೀಚಿಗೆ ಆಗಮಿಸಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಮೂವರು ವಿದ್ಯಾರ್ಥಿನಿಯರು ಅಲ್ಲಿಂದ ಪರಾರಿಯಾಗಿದ್ದರು. ಅವರೆಲ್ಲರು ಕೇರಳದ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣದ ಕುರಿತಂತೆ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಮೊದಲಿಗೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ವಶಕ್ಕೆ ಪಡೆದವರ ಸಂಖ್ಯೆ 7ಕ್ಕೇರಿದೆ.
ಹಲ್ಲೆ ಮಾಡಿದ್ದ ತಂಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕೂಡ ಇದ್ದ ಎನ್ನುವುದು ಗಮನಾರ್ಹವಾಗಿದೆ. ಘಟನೆಯಲ್ಲಿ ಭಾಗಿ ಆಗಿದ್ದವರನ್ನು ವಶಕ್ಕೆ ಪಡೆಯಲಾಗುತ್ತದೆ, ಇದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು