1:24 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು

29/01/2022, 15:19

ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ.
ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.

ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೊ(22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇದನ್ನು ತಡೆಯಲು ನೀರಿಗೆ ಹಾರಿದ ಲಾಯ್ಡ್ ಸಾವನ್ನಪ್ಪಿದ್ದಾರೆ. ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಲಾಯ್ಡ್ ಡಿಸೋಜ ಮತ್ತು ಅಶ್ವಿತಾ ಹಲವು ವರುಷಗಳಿಂದ ಪರಸ್ಪರ ಪ್ರೇಮಿಸುತ್ತಿದ್ದರಂತೆ. ಈ ನಡುವೆ ಲಾಯ್ಡ್ ಅವರಿಗೆ ಬೇರೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಇದೆ ಎಂಬುದು ಅಶ್ವಿತಾ ಆರೋಪಿಸಿದ್ದರು.
ಇದರ ಕುರಿತು ಮಾತುಕತೆಗಾಗಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರು ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಸೇರಿದ್ದಾರೆ. ಮಾತುಕತೆ ವೇಳೆ ಅಶ್ವಿತಾ ಬೇಸರಗೊಂಡು ಏಕಾಏಕಿ‌ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾವಳಿ ಕಾವಲು ಪಡೆಯ ಮೋಹನ್ ಚಂದ್ರ, ಸುಜಿತ್, ಅಶೋಕ್ ಸೋಮೇಶ್ವರ, ಮೀನುಗಾರರಾದ ಕಲ್ಪೇಶ್ ಹಾಗೂ ಗಿರೀಶ್ ಸಮುದ್ರಪಾಲಾದವರನ್ನು ಹರಸಾಹಸಪಟ್ಟು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಲಾಯ್ಡ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು