11:39 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು

29/01/2022, 15:19

ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ.
ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.

ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೊ(22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇದನ್ನು ತಡೆಯಲು ನೀರಿಗೆ ಹಾರಿದ ಲಾಯ್ಡ್ ಸಾವನ್ನಪ್ಪಿದ್ದಾರೆ. ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಲಾಯ್ಡ್ ಡಿಸೋಜ ಮತ್ತು ಅಶ್ವಿತಾ ಹಲವು ವರುಷಗಳಿಂದ ಪರಸ್ಪರ ಪ್ರೇಮಿಸುತ್ತಿದ್ದರಂತೆ. ಈ ನಡುವೆ ಲಾಯ್ಡ್ ಅವರಿಗೆ ಬೇರೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಇದೆ ಎಂಬುದು ಅಶ್ವಿತಾ ಆರೋಪಿಸಿದ್ದರು.
ಇದರ ಕುರಿತು ಮಾತುಕತೆಗಾಗಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರು ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಸೇರಿದ್ದಾರೆ. ಮಾತುಕತೆ ವೇಳೆ ಅಶ್ವಿತಾ ಬೇಸರಗೊಂಡು ಏಕಾಏಕಿ‌ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾವಳಿ ಕಾವಲು ಪಡೆಯ ಮೋಹನ್ ಚಂದ್ರ, ಸುಜಿತ್, ಅಶೋಕ್ ಸೋಮೇಶ್ವರ, ಮೀನುಗಾರರಾದ ಕಲ್ಪೇಶ್ ಹಾಗೂ ಗಿರೀಶ್ ಸಮುದ್ರಪಾಲಾದವರನ್ನು ಹರಸಾಹಸಪಟ್ಟು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಲಾಯ್ಡ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು