7:29 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು

29/01/2022, 15:19

ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ.
ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.

ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೊ(22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇದನ್ನು ತಡೆಯಲು ನೀರಿಗೆ ಹಾರಿದ ಲಾಯ್ಡ್ ಸಾವನ್ನಪ್ಪಿದ್ದಾರೆ. ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಲಾಯ್ಡ್ ಡಿಸೋಜ ಮತ್ತು ಅಶ್ವಿತಾ ಹಲವು ವರುಷಗಳಿಂದ ಪರಸ್ಪರ ಪ್ರೇಮಿಸುತ್ತಿದ್ದರಂತೆ. ಈ ನಡುವೆ ಲಾಯ್ಡ್ ಅವರಿಗೆ ಬೇರೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಇದೆ ಎಂಬುದು ಅಶ್ವಿತಾ ಆರೋಪಿಸಿದ್ದರು.
ಇದರ ಕುರಿತು ಮಾತುಕತೆಗಾಗಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರು ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಸೇರಿದ್ದಾರೆ. ಮಾತುಕತೆ ವೇಳೆ ಅಶ್ವಿತಾ ಬೇಸರಗೊಂಡು ಏಕಾಏಕಿ‌ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾವಳಿ ಕಾವಲು ಪಡೆಯ ಮೋಹನ್ ಚಂದ್ರ, ಸುಜಿತ್, ಅಶೋಕ್ ಸೋಮೇಶ್ವರ, ಮೀನುಗಾರರಾದ ಕಲ್ಪೇಶ್ ಹಾಗೂ ಗಿರೀಶ್ ಸಮುದ್ರಪಾಲಾದವರನ್ನು ಹರಸಾಹಸಪಟ್ಟು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಲಾಯ್ಡ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು