10:10 PM Monday20 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಸೋಮವಾರಪೇಟೆ | ಆಕಸ್ಮಿಕ ಬೆಂಕಿ ಅವಘಡ: ಮಾಜಿ ಯೋಧ ದುರ್ಮರಣ

04/03/2026, 14:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ತೊಳೂರು ಶೆಟ್ಟಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ತೊಳೂರು ಶೆಟ್ಟಳ್ಳಿ ಜಂಕ್ಷನ್ ನಿವಾಸಿ ಹೆಚ್. ಎ ವೆಂಕಟೇಶ್ (64) ಮೃತ ದುರ್ದೈವಿ. ಮನೆಯಲ್ಲಿ ತೋಟದ ಕೆಲಸಕ್ಕೆ ಎಂದು ತಂದು ಇಡಲಾಗಿದ್ದ ಪೆಟ್ರೋಲ್ ಸೋರಿಕೆಯಾಗಿದ್ದು, ಆಕಸ್ಮಿಕ ಬೆಂಕಿ ತಗುಲಿಕೊಂಡಿದ್ದು, ಗಂಗ್ರಿನ್ ನಿಂದ ಒಂದು ಕಾಲನ್ನು ಕಳೆದುಕೊಂಡಿದ್ದ ವೆಂಕಟೇಶ್ ಆಕಸ್ಮಿಕ ಬೆಂಕಿ ಇಂದ ಮನೆಯಿಂದ ಹೊರ ಬರಲು ಸಾಧ್ಯವಾಗದೆ ತೀವ್ರ ಸ್ವರೂಪದ ಗಾಯಗಳಿಂದ ಮೃತಪಟ್ಟಿದ್ದಾರೆ. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಹಾಯಕ್ಕೆ ಯಾರೂ ಇರಲಿಲ್ಲ ಎನ್ನಲಾಗಿದ್ದು, ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸುಟ್ಟು ಕರಕಲಾಗಿದೆ. ಬೆಂಕಿಯನ್ನು ಗಮನಿಸಿ ಸ್ಥಳಕ್ಕೆ ಅಗ್ನಿ ಶಾಮಕ ದಳ ಬರುವಷ್ಟರಲ್ಲಿ ವೆಂಕಟೇಶ್ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದರು. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು