5:44 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮದ್ಯದ ಅಮಲಿನಲ್ಲಿ ಮಗನಿಂದಲೇ ತಂದೆಯ ಹತ್ಯೆ: ತೋಟದ ಮಾಲೀಕ ಸಹಿತ 8 ಮಂದಿ ಬಂಧನ

17/01/2026, 16:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ಕಟ್ಟೆಮಾಡುನಲ್ಲಿ ಮದ್ಯದ ಅಮಲಿನಲ್ಲಿ ಮಗನೇ ತಂದೆಯ ಹತ್ಯೆ ಮಾಡಿದ ಘಟನೆ ನಡೆದಿದೆ.


ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸಕೇರಿ ನಿವಾಸಿ ದೇವಯ್ಯ ಅವರ ಸಾಲು ಮನೆಯಲ್ಲಿ ವಾಸವಿದ್ದ ವಲಸಿಗ ಕಾರ್ಮಿಕರಾದ ಬುರೋ ಮುದ್ದಿ ಹಾಗೂ ಆತನ ಪುತ್ರ ಪ್ರಶಾಂತ್ ಮುದ್ದಿ ನಡುವೆ ಜಗಳ ನಡೆದಿದ್ದು, ಜಗಳ ವೇಳೆ ಪ್ರಶಾಂತ್ ಮುದ್ದಿ ತಂದೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಜನವರಿ 11 ರಂದು ಬುರೋ ಸ್ಥಳದಲ್ಲೇ ಸಾವನಪ್ಪಿದ ಹಿನ್ನಲೆಯಲ್ಲಿ ಸಾವನ್ನು ಮರೆ ಮಾಚುವ ಸಲುವಾಗಿ ತೋಟದ ಮಾಲೀಕ ದೇವಯ್ಯ ಮೂಲಕ ಮಡಿಕೇರಿಯ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿ ಸಾಕ್ಷಿ ನಾಶಪಡಿಸಿದ್ದರು. ಈ ಬಗ್ಗೆ ಮಾಹಿತಿ ದೊರೆತ ಪೊಲೀಸರು ಕೊಲೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ಈ ಪ್ರಕರಣ ಸಂಬಂಧ A1 ಆರೋಪಿ ಪ್ರಶಾಂತ್ ನೀಡಿದ ಮಾಹಿತಿ ಮೇರೆಗೆ ಅದೇ ಕುಟುಂಬದ ಮೂಲತಃ ಪಶ್ಚಿಮ ಬಂಗಾಳದ ವರ್ಧಮಾನ್ ಜಿಲ್ಲೆಯ ಪ್ರಶಾಂತ್ ಮುದಿ, ಶ್ರೀಕಾಂತ್ ಮುದಿ, ಸುಧಾನ್ ಮುದಿ ಲಕ್ಷ್ಮೀ ಮುದಿ, ತನುಶ್ರೀ, ಬಸಂತಿ ಮುದಿ ಹಾಗೂ ತೋಟದ ಮಾಲೀಕರು ಆದ ಎಂ. ಎಸ್ ದೇವಯ್ಯ ಹಾಗೂ ಪತ್ನಿ ಭಾರತಿ ಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು