2:09 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು: ಮೋಜು- ಮಸ್ತಿಗೆ ಜಿಲ್ಲಾಡಳಿತ ಪರ್ಮಿಷನ್

29/12/2024, 21:06

ಭಟ್ಕಳ(reporterkarnataka.com): ಮೂವರು ಶಾಲಾ ಬಾಲಕಿಯ ಇತ್ತೀಚೆಗೆ ಆಹುತಿ ಪಡೆದು ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು ಬಂದಿದೆ. ಜಿಲ್ಲಾಡಳಿತ ಇಲ್ಲಿ ಜಲಕ್ರೀಡೆಗೆ ನಡೆಸಲು ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆದಿದೆ.
ಭಟ್ಕಳ ಸಮೀಪದ ಮುರುಡೇಶ್ವರ ದೇವಾಲಯ ದೇಶ- ವಿದೇಶಗಳ ಭಕ್ತರ, ಪ್ರವಾಸಿಗರ ಆಗಮನದ ತಾಣವಾಗಿದೆ. ಆಗಸದೆತ್ತರದ ಇಲ್ಲಿನ ಭಗವಾನ್ ಶಿವನ ಸುಂದರ ಮೂರ್ತಿ ವಿಶೇಷ ಆಕರ್ಷಣೆಯಾಗಿದೆ. ಇತ್ತೀಚೆಗೆ ಇಲ್ಲಿ ಪ್ರವಾಸಕ್ಕೆ ಆಗಮಿಸಿದ ಕೋಲಾರ ಜಿಲ್ಲೆಯ ಶಾಲಾ ಮಕ್ಕಳ ಪೈಕಿ ಮೂವರು ಬಾಲಕಿಯರು ಸಮುದ್ರಪಾಲಾಗಿ ಜೀವ ಕಳೆದುಕೊಂಡಿದ್ದರು. ಸುರಕ್ಷತೆಯ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯ ಬಗ್ಗೆ ಸಾರ್ವಜನಿಕರಿಂದ ಕಟು ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಮುದ್ರದಲ್ಲಿ ಜಲಕ್ರೀಡೆಗೆ ನಿರ್ಬಂಧ ವಿಧಿಸಿತ್ತು.
ಇದೀಗ ಜಿಲ್ಲಾಡಳಿತ ದುರಂತದ ನಡೆದು 19 ದಿನಗಳ ಬಳಿಕ ಕಡಲತೀರ ಪ್ರವಾಸಿಗರಿಗೆ ಮುಕ್ತವಾಗಿಸಿದೆ. ಕಡಲತೀರದಲ್ಲಿ ಅಪಾಯಕಾರಿ ವಲಯ (ಡೇಂಜರ್ ಜೋನ್) ಮತ್ತು ಸುರಕ್ಷಿತ ವಲಯ(ಸೇಫ್ ಜೋನ್) ಎಂದು ಎರಡು ವಿಭಾಗ ಮಾಡಿ ಗುರುತಿಸಲಾಗಿದೆ. ಜಿಲ್ಲಾಡಳಿತ ಗುರುತಿಸಿದ ಸೇಫ್ ಜೋನ್‌ನಲ್ಲಿ ಮಾತ್ರ ಪ್ರವಾಸಿಗರು ಈಜಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು