5:52 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

25/03/2025, 20:41

ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ, 9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು. ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು.
ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್‌ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು