2:56 AM Wednesday29 - October 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು

ಇತ್ತೀಚಿನ ಸುದ್ದಿ

SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

25/03/2025, 20:41

ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ, 9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು. ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು.
ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್‌ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು