8:53 PM Tuesday25 - March 2025
ಬ್ರೇಕಿಂಗ್ ನ್ಯೂಸ್
Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್… ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:…

ಇತ್ತೀಚಿನ ಸುದ್ದಿ

SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

25/03/2025, 20:41

ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ, 9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು. ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು.
ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್‌ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು