2:59 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

25/03/2025, 20:41

ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ, 9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು. ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು.
ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್‌ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು