1:44 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

SOTTO Karnataka | ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

25/03/2025, 20:41

ಬೆಂಗಳೂರು(reporterkarnataka.com): ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ, 9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು. ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು.
ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್‌ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು