4:03 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಸೌದಿ ಅರೇಬಿಯಾ: ಒಂದೇ ದಿನ 81 ಮಂದಿಗೆ ಮರಣದಂಡನೆ; 1980 ಬಳಿಕ ಮೊದಲ ದಾಖಲೆ

13/03/2022, 13:37

ರಿಯಾದ್(reporterkarnataka.com):
ಸೌದಿ ಅರೇಬಿಯ ರಾಜಾಡಳಿತವು ಶನಿವಾರ.ಬರೋಬ್ಬರಿ 81 ಮಂದಿಯನ್ನು ‘ಮರಣದಂಡನೆ’ಗೆ ಗುರಿಪಡಿಸಿದೆ.

ಒಂದೇ ದಿನ ಇಷ್ಟೊಂದು ಜನರನ್ನು ದಂಡನೆ ಮೂಲಕ ಸಾಯಿಸಿರೋದು ಇದೇ ದೊಡ್ಡ ಸಂಖ್ಯೆ. ಈ ಹಿಂದೆ 1979ರಲ್ಲಿ ಮೆಕ್ಕಾದ ಮಸೀದಿಯ ಮೇಲೆ ದಾಳಿ ಮಾಡಿದ್ದ ಪ್ರಕರಣದಲ್ಲಿ 63 ಉಗ್ರರನ್ನು 1980ರ ದಿನವೊಂದರಲ್ಲಿ ಮರಣದಂಡನೆಗೆ ಗುರಿಪಡಿಸಲಾಗಿತ್ತು. ಅದುವೇ ಸೌದಿ ಅರೇಬಿಯಾದ ದಿನವೊಂದರ ಮರಣದಂಡನೆ ದಾಖಲೆಯಾಗಿತ್ತು.

ಸೌದಿಯಲ್ಲಿ ಮರಣದಂಡನೆ ಶಿಕ್ಷೆ ವಿರಳವೇನಲ್ಲ. ಈ ಬಾರಿ ದಂಡನೆಗೊಳಗಾದವರು ಮುಗ್ಧ ಜನರು, ಮಹಿಳೆಯರ ಸಾವಿಗೆ ಕಾರಣರಾಗಿದ್ದರು ಎಂಬ ಪ್ರಕಟಣೆ ರಾಜಾಡಳಿತದಿಂದ ಹೊರಬಿದ್ದಿದೆ.

ಸೌದಿ ಅರೇಬಿಯಾವು ತನ್ನ ಪಕ್ಕದ ರಾಷ್ಟ್ರ ಯೆಮೆನ್ ನಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ವಿರುದ್ಧ ಸೆಣೆಸುತ್ತಿದ್ದೆ. ಈಗ ಸೌದಿಯಲ್ಲಾಗಿರುವ ಮರಣದಂಡನೆಗಳೂ ಇದೇ ಸಂಬಂಧದ್ದು ಎಂದು ಹೇಳಲಾಗುತ್ತಿದೆ. ಮರಣದಂಡನೆಗೆ ಒಳಗಾದವರಲ್ಲಿ 73 ಸೌದಿಗಳು, 7 ಯೆಮನಿಯರು, ಒಬ್ಬ ಸಿರಿಯನ್ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು