11:11 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ, ವಾಹನ ಜಾಥಾ

02/09/2023, 22:21

ಬೆಳ್ತಂಗಡಿ(reporterarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಸೌಜನ್ಯ ಪರ ಸೆ.3ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದ ವಿವಿಧಡೆಗಳಿಂದ ಲಕ್ಷಾಂತರ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ನಡುವೆ ಪ್ರತಿಭಟನೆ ರದ್ದಾಗಿದೆ ಎಂಬ ವದಂತಿಯನ್ನು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರಾಕರಿಸಿದ್ದಾರೆ. ಸೆ. 3ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆದೇ ಸಿದ್ದ. ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನಾಳೆಯ ಸಭೆ ರದ್ದಾಗಿಲ್ಲ. ಕೆಲವರು ಜನರ ದಾರಿ ತಪ್ಪಿಸಲು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಲ್ಲರೂ ಆಗಮಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಸೌಜನ್ಯಾ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ನಡೆಯುವ ಈ ಪ್ರತಿಭಟನೆಯಲ್ಲಿ ಒಕ್ಕಲಿಗ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ, ಹಿಂದೂ ಸಂಘಟನೆಯ ನಾಯಕ ಪ್ರಮೋದ್ ಮುತಾಲಿಕ್ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ.
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ
ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿದೆ.
ವಾಹನ ಜಾಥಾ ಕೂಡ ನಡೆಯಲಿದೆ.
ವಾಹನ ಜಾಥಾ: ನಾರಾವಿ-ಬೆಳ್ತಂಗಡಿ ಬೆಳಗ್ಗೆ 9 ಗಂಟೆ, ಕುತ್ತೂರು-ಬೆಳ್ತಂಗಡಿ ಬೆಳಗ್ಗೆ 9.10, ಸುಲ್ಕೇರಿ-ಬೆಳ್ತಂಗಡಿ ಬೆಳಗ್ಗೆ 9.15, ಪಿಲ್ಯ-ಬೆಳ್ತಂಗಡಿ ಬೆಳಗ್ಗೆ 9.20, ಅಳದಂಗಡಿ-ಬೆಳ್ತಂಗಡಿ ಬೆಳಗ್ಗೆ 9.30ಕ್ಕೆ ವಾಹನ ಜಾಥಾ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು