3:35 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ: ಕೆಆರ್ ಎಸ್ ಪಕ್ಷದ ಪ್ರತಿಭಟನಾ ಜಾಥಾ ಕೊಟ್ಡಿಗೆಹಾರಕ್ಕೆ ಆಗಮನ

28/08/2023, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆ.ಆರ್.ಎಸ್) ಪಕ್ಷದ ವತಿಯಿಂದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸೌಜನ್ಯಾ ಅತ್ಯಾಚಾರ ಖಂಡಿಸಿ ನ್ಯಾಯ ದೊರಕಿಸಲು ಪ್ರತಿಭಟನಾ ನಡಿಗೆ ಜಾಥಾ ಮೂರು ದಿನದಿಂದ ಆರಂಭವಾಗಿದ್ದು ಸೋಮವಾರ ಸಂಜೆ ಕೊಟ್ಟಿಗೆಹಾರ, ಬಣಕಲ್ ಗೆ ತಲುಪಿತು.


ಪ್ರತಿಭಟನಾ ಜಾಥಾದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ ‘ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ನಡೆದು 11 ವರ್ಷವಾದರೂ ಈವರೆಗೆ ಕೊಲೆ ಮಾಡಿದವರನ್ನು ಸರ್ಕಾರ ಬಂಧಿಸಲಾಗಿಲ್ಲ.ಅಮಾಯಕನನ್ನೂ ಬಂಧಿಸಿ ಬಿಡಲಾಗಿದೆ. ಬಡವರ ಹೆಣ್ಣು ಮಕ್ಕಳ ಅತ್ಯಾಚಾರ ಷೋಷಣೆ ನಿಲ್ಲಬೇಕು. ಅತ್ಯಾಚಾರವನ್ನು ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು. ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯಾವ ಒತ್ತಡಕ್ಕೂ ಮಣಿಯದೇ ಮರು ತನಿಖೆಗೆ ಆದೇಶಿಸಬೇಕು. ಸೌಜನ್ಯ ಮಹಿಳಾ ಆಯೋಗ ಸ್ಥಾಪನೆಯಾಗಬೇಕು. ಸೌಜನ್ಯ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ತನಿಖಾಧಿಕಾರಿ ವಿರುದ್ದ ತನಿಖೆಯಾಗಬೇಕು. ಪ್ರಕರಣದ ದಾರಿ ತಪ್ಪಿಸಿದ ಪೊಲೀಸರ ಕ್ರಮಕ್ಕೂ ಶಿಕ್ಷೆಯಾಗಬೇಕು. ಎಲ್ಲಾ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ಸಂಬಂಧಿತ ಪ್ರಕರಣಗಳು ಪ್ರಾಮುಖ್ಯತೆ ಮೇಲೆ ನಿಗದಿತ ಸಮಯದಲ್ಲಿ ಬಗೆಹರಿಯಬೇಕು. ಮಕ್ಕಳ ಮತ್ತು ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ಸಂಸ್ಥೆ ರಚನೆಯಾಗಬೇಕು. ಸೌಜನ್ಯ ನಮ್ಮೆಲ್ಲರ ಮಗಳೆಂದು ಭಾವಿಸಿ ಸೌಜನ್ಯ ಪರ ಎಲ್ಲರೂ ಧ್ವನಿಗೂಡಿಸಬೇಕು.ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸುವಂತಾಗಬೇಕು’ ಎಂದು ಅವರು ಆಗ್ರಹಿಸಿದರು.
ಪ್ರತಿಭಟನಾ ನಡಿಗೆ ಜಾಥಾದಲ್ಲಿ ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಬೆಳಿಗ್ಗೆಯಿಂದ ಸಂಜೆವರೆಗೆ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಮೌನಾವೃತ ಕೈಗೊಂಡಿದ್ದು ಜಾಥಾದಲ್ಲಿ ಸೌಜನ್ಯಗೆ ನ್ಯಾಯ ಒದಗಿಸುವಂತೆ ಜನರಿಗೆ ನಮಸ್ಕರಿಸಿದರು. ಜಾಥಾದಲ್ಲಿ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ಸಿ.ಎನ್.ದೀಪಕ್, ರಘುಪತಿ, ಮಲ್ಲಿಕಾರ್ಜುನ್ ಭಟ್ರಳ್ಳಿ,ಆರೋಗ್ಯಸ್ವಾಮಿ, ಜೀವನ್,ಎನ್ ಮೂರ್ತಿ,ರವಿಕುಮಾರ್, ಮೋಹನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು