1:41 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ: ಕೆಆರ್ ಎಸ್ ಪಕ್ಷದ ಪ್ರತಿಭಟನಾ ಜಾಥಾ ಕೊಟ್ಡಿಗೆಹಾರಕ್ಕೆ ಆಗಮನ

28/08/2023, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆ.ಆರ್.ಎಸ್) ಪಕ್ಷದ ವತಿಯಿಂದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸೌಜನ್ಯಾ ಅತ್ಯಾಚಾರ ಖಂಡಿಸಿ ನ್ಯಾಯ ದೊರಕಿಸಲು ಪ್ರತಿಭಟನಾ ನಡಿಗೆ ಜಾಥಾ ಮೂರು ದಿನದಿಂದ ಆರಂಭವಾಗಿದ್ದು ಸೋಮವಾರ ಸಂಜೆ ಕೊಟ್ಟಿಗೆಹಾರ, ಬಣಕಲ್ ಗೆ ತಲುಪಿತು.


ಪ್ರತಿಭಟನಾ ಜಾಥಾದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ ‘ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ನಡೆದು 11 ವರ್ಷವಾದರೂ ಈವರೆಗೆ ಕೊಲೆ ಮಾಡಿದವರನ್ನು ಸರ್ಕಾರ ಬಂಧಿಸಲಾಗಿಲ್ಲ.ಅಮಾಯಕನನ್ನೂ ಬಂಧಿಸಿ ಬಿಡಲಾಗಿದೆ. ಬಡವರ ಹೆಣ್ಣು ಮಕ್ಕಳ ಅತ್ಯಾಚಾರ ಷೋಷಣೆ ನಿಲ್ಲಬೇಕು. ಅತ್ಯಾಚಾರವನ್ನು ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು. ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯಾವ ಒತ್ತಡಕ್ಕೂ ಮಣಿಯದೇ ಮರು ತನಿಖೆಗೆ ಆದೇಶಿಸಬೇಕು. ಸೌಜನ್ಯ ಮಹಿಳಾ ಆಯೋಗ ಸ್ಥಾಪನೆಯಾಗಬೇಕು. ಸೌಜನ್ಯ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ತನಿಖಾಧಿಕಾರಿ ವಿರುದ್ದ ತನಿಖೆಯಾಗಬೇಕು. ಪ್ರಕರಣದ ದಾರಿ ತಪ್ಪಿಸಿದ ಪೊಲೀಸರ ಕ್ರಮಕ್ಕೂ ಶಿಕ್ಷೆಯಾಗಬೇಕು. ಎಲ್ಲಾ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ಸಂಬಂಧಿತ ಪ್ರಕರಣಗಳು ಪ್ರಾಮುಖ್ಯತೆ ಮೇಲೆ ನಿಗದಿತ ಸಮಯದಲ್ಲಿ ಬಗೆಹರಿಯಬೇಕು. ಮಕ್ಕಳ ಮತ್ತು ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ಸಂಸ್ಥೆ ರಚನೆಯಾಗಬೇಕು. ಸೌಜನ್ಯ ನಮ್ಮೆಲ್ಲರ ಮಗಳೆಂದು ಭಾವಿಸಿ ಸೌಜನ್ಯ ಪರ ಎಲ್ಲರೂ ಧ್ವನಿಗೂಡಿಸಬೇಕು.ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸುವಂತಾಗಬೇಕು’ ಎಂದು ಅವರು ಆಗ್ರಹಿಸಿದರು.
ಪ್ರತಿಭಟನಾ ನಡಿಗೆ ಜಾಥಾದಲ್ಲಿ ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಬೆಳಿಗ್ಗೆಯಿಂದ ಸಂಜೆವರೆಗೆ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಮೌನಾವೃತ ಕೈಗೊಂಡಿದ್ದು ಜಾಥಾದಲ್ಲಿ ಸೌಜನ್ಯಗೆ ನ್ಯಾಯ ಒದಗಿಸುವಂತೆ ಜನರಿಗೆ ನಮಸ್ಕರಿಸಿದರು. ಜಾಥಾದಲ್ಲಿ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ಸಿ.ಎನ್.ದೀಪಕ್, ರಘುಪತಿ, ಮಲ್ಲಿಕಾರ್ಜುನ್ ಭಟ್ರಳ್ಳಿ,ಆರೋಗ್ಯಸ್ವಾಮಿ, ಜೀವನ್,ಎನ್ ಮೂರ್ತಿ,ರವಿಕುಮಾರ್, ಮೋಹನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು