4:35 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ: ಕೆಆರ್ ಎಸ್ ಪಕ್ಷದ ಪ್ರತಿಭಟನಾ ಜಾಥಾ ಕೊಟ್ಡಿಗೆಹಾರಕ್ಕೆ ಆಗಮನ

28/08/2023, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆ.ಆರ್.ಎಸ್) ಪಕ್ಷದ ವತಿಯಿಂದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸೌಜನ್ಯಾ ಅತ್ಯಾಚಾರ ಖಂಡಿಸಿ ನ್ಯಾಯ ದೊರಕಿಸಲು ಪ್ರತಿಭಟನಾ ನಡಿಗೆ ಜಾಥಾ ಮೂರು ದಿನದಿಂದ ಆರಂಭವಾಗಿದ್ದು ಸೋಮವಾರ ಸಂಜೆ ಕೊಟ್ಟಿಗೆಹಾರ, ಬಣಕಲ್ ಗೆ ತಲುಪಿತು.


ಪ್ರತಿಭಟನಾ ಜಾಥಾದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ ‘ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ನಡೆದು 11 ವರ್ಷವಾದರೂ ಈವರೆಗೆ ಕೊಲೆ ಮಾಡಿದವರನ್ನು ಸರ್ಕಾರ ಬಂಧಿಸಲಾಗಿಲ್ಲ.ಅಮಾಯಕನನ್ನೂ ಬಂಧಿಸಿ ಬಿಡಲಾಗಿದೆ. ಬಡವರ ಹೆಣ್ಣು ಮಕ್ಕಳ ಅತ್ಯಾಚಾರ ಷೋಷಣೆ ನಿಲ್ಲಬೇಕು. ಅತ್ಯಾಚಾರವನ್ನು ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು. ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯಾವ ಒತ್ತಡಕ್ಕೂ ಮಣಿಯದೇ ಮರು ತನಿಖೆಗೆ ಆದೇಶಿಸಬೇಕು. ಸೌಜನ್ಯ ಮಹಿಳಾ ಆಯೋಗ ಸ್ಥಾಪನೆಯಾಗಬೇಕು. ಸೌಜನ್ಯ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ತನಿಖಾಧಿಕಾರಿ ವಿರುದ್ದ ತನಿಖೆಯಾಗಬೇಕು. ಪ್ರಕರಣದ ದಾರಿ ತಪ್ಪಿಸಿದ ಪೊಲೀಸರ ಕ್ರಮಕ್ಕೂ ಶಿಕ್ಷೆಯಾಗಬೇಕು. ಎಲ್ಲಾ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ಸಂಬಂಧಿತ ಪ್ರಕರಣಗಳು ಪ್ರಾಮುಖ್ಯತೆ ಮೇಲೆ ನಿಗದಿತ ಸಮಯದಲ್ಲಿ ಬಗೆಹರಿಯಬೇಕು. ಮಕ್ಕಳ ಮತ್ತು ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ಸಂಸ್ಥೆ ರಚನೆಯಾಗಬೇಕು. ಸೌಜನ್ಯ ನಮ್ಮೆಲ್ಲರ ಮಗಳೆಂದು ಭಾವಿಸಿ ಸೌಜನ್ಯ ಪರ ಎಲ್ಲರೂ ಧ್ವನಿಗೂಡಿಸಬೇಕು.ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸುವಂತಾಗಬೇಕು’ ಎಂದು ಅವರು ಆಗ್ರಹಿಸಿದರು.
ಪ್ರತಿಭಟನಾ ನಡಿಗೆ ಜಾಥಾದಲ್ಲಿ ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಬೆಳಿಗ್ಗೆಯಿಂದ ಸಂಜೆವರೆಗೆ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಮೌನಾವೃತ ಕೈಗೊಂಡಿದ್ದು ಜಾಥಾದಲ್ಲಿ ಸೌಜನ್ಯಗೆ ನ್ಯಾಯ ಒದಗಿಸುವಂತೆ ಜನರಿಗೆ ನಮಸ್ಕರಿಸಿದರು. ಜಾಥಾದಲ್ಲಿ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ಸಿ.ಎನ್.ದೀಪಕ್, ರಘುಪತಿ, ಮಲ್ಲಿಕಾರ್ಜುನ್ ಭಟ್ರಳ್ಳಿ,ಆರೋಗ್ಯಸ್ವಾಮಿ, ಜೀವನ್,ಎನ್ ಮೂರ್ತಿ,ರವಿಕುಮಾರ್, ಮೋಹನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು