5:40 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರ ಸರಕಾರ ಮರು ತನಿಖೆ ನಡೆಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

28/10/2023, 17:28

ಉಡುಪಿ(reporterkarnataka.com): ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರದ ಸಿಬಿಐ ಮಾಡಿರುವುದರಿಂದ ಪ್ರಕರಣದ ಮರು ತನಿಖೆಯನ್ನು ಕೇಂದ್ರ ಸರಕಾರ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಪ್ರಶ್ನೆಯೊಂದಕ್ಕೆ ಉತ್ತರಿಸಿ ಪ್ರಕರಣವನ್ನು ನಾವು ಮರು ತನಿಖೆ ನಡೆಸಲು ಬರೋದಿಲ್ಲ ಎಂದರು.
ಕಾರ್ಕಳ ಬೈಲೂರಿನ ಪರಶುರಾಮ ಮೂರ್ತಿ ಕುರಿತು ಕೇಳಲಾದ ಪ್ರಶ್ನೆ ಉತ್ತರಿಸಿದ ಮುಖ್ಯಮಂತ್ರಿ, ಮೂರ್ತಿ ಅಸಲಿಯೋ? ಅಥವಾ ನಕಲಿಯೋ? ಎನ್ನುವುದರ ಕುರಿತು ತನಿಖೆ ನಡೆಸಲಾಗುವುದು ಎಂದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ‘ಕಲೆಕ್ಷನ್ ಮಾಸ್ಟರ್ ಆಫ್ ಕರ್ನಾಟಕ’ ಎಂದು ಅವಹೇಳನ ಮಾಡಿದ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ಶಾಸಕ ಹರೀಶ್ ಪೂಂಜ ಅವರು ರಾಜಕೀಯದಲ್ಲಿ ಬಚ್ಚಾ. ಹರೀಶ್ ಪೂಂಜ ಅವರು ಶಾಸಕರಾಗಿದ್ದು ಮೊನ್ನೆ. ನಾನು 1983ರಿಂದ ಶಾಸಕನಾಗಿದ್ದೇನೆ. 1985ರಲ್ಲಿ ಸಚಿವನಾಗಿದ್ದೆ. ಆವತ್ತೂ ಯಾರೂ ಕರೆದಿಲ್ಲ. ಪೂಂಜ ರಾಜಕೀಯದಲ್ಲಿ ಬಚ್ಚಾ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು