2:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

21/02/2024, 17:52

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ಸೌಜನ್ಯಾ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿಗೆ ಸ್ಪಂದಿಸಿದ ಹೈಕೋರ್ಟ್ ರಾಜ್ಯ ಸರಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ. ಮೃತ ಸೌಜನ್ಯಳ ತಂದೆ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾ| ಕೆ.ನಟರಾಜನ್‌ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದೆ.
ಪ್ರಕರಣದಿಂದ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಸಿಬಿಐ ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ, ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್‌ ರಾವ್‌‌ ಅವರನ್ನೂ ಪ್ರತಿವಾದಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು