11:57 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸೌಜನ್ಯಕ್ಕೂ ಪ್ರಧಾನಿ ಮೋದಿ ಬಿಎಸ್ ವೈ, ನಳಿನ್ ಹೆಸರು ಹೇಳಲಿಲ್ಲ: ಕಾಂಗ್ರೆಸ್ ವ್ಯಂಗ್ಯ

02/09/2022, 23:27

ಬೆಂಗಳೂರು(reporterkarnataka.com): ಮಂಗಳೂರಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಭಾಷಣದ ಆರಂಭದಲ್ಲಿ ಮಾಜಿ ಮುಖ್ಯಮಂತ್ರಿಯವರು ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರನ್ನೇ ಪ್ರಸ್ತಾಪಿಸಿಲ್ಲ. ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಇದನ್ನು ಅಸ್ತ್ರವಾಗಿ ಬಳಸಿ ಕಟು ಟೀಕೆ ಮಾಡಿದೆ.

ಬಿ.ಎಸ್.ಯಡಿಯೂರಪ್ಪ ಅವರೀಗ ಬಿಜೆಪಿಯಲ್ಲಿ ಚಲಾವಣೆ ಇಲ್ಲದ ನಾಣ್ಯ. ಬಿಎಸ್ ವೈ ವೇದಿಕೆಯಲ್ಲಿದ್ದರೂ ಮೋದಿಯವರು ಸೌಜನ್ಯಕ್ಕೂ ಅವರ ಹೆಸರು ಹೇಳಲಿಲ್ಲ, ಇಷ್ಟು ಬೇಗ BSYBJP ಅವರು ಒಡೆದ ಮಡಕೆಯಂತಾದರೇ ಬಿಜೆಪಿಯವರಿಗೆ? ಅಡ್ವಾಣಿಯನ್ನೇ ಮುಕ್ತ ಮಾಡಿರುವಾಗ #BSYmuktaBJP ಮಾಡುವುದು ಮೋದಿಯವರಿಗೆ ಯಾವ ಲೆಕ್ಕ! ಉಂಡ ಮನೆಯ ಗಳ ಹಿರಿಯುವುದು ಬಿಜೆಪಿ ಹುಟ್ಟುಗುಣ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಪ್ರಧಾನಿ ಮೋದಿ ಭೇಟಿಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದ್ದು, ಬೆಂಗಳೂರ್ – ಮೈಸೂರ್ ರೈಲನ್ನು ಭಾಷಣದಲ್ಲಿ ಅದ್ಭುತವಾಗಿ ಬಿಟ್ಟಿದ್ದ ನರೇಂದ್ರ ಮೋದಿ ಅವರೇ, ಮೈಸೂರು ಪ್ಯಾರಿಸ್ ಆಗ್ಲಿಲ್ಲ. ಸಬ್ ಅರ್ಬನ್ ರೈಲು ನಿಗದಿತ ಅವಧಿ ಮುಗಿಯುತ್ತಾ ಬಂದರೂ ಓಡಲಿಲ್ಲ. ಮೈಸೂರು ಹೆದ್ದಾರಿಯು ಜಲಮಾರ್ಗವಾಗಿದೆ! ರಸ್ತೆ ಗುಂಡಿಗಳು ಪ್ರಾಣ ತೆಗೆಯುತ್ತಿವೆ. ಇದಕ್ಕೆ #NimHatraIdyaUttara ? #ModiMosa ಎಂದು ಟೀಕಿಸಿದೆ.

ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ, ದಕ್ಷಿಣ ಕನ್ನಡದ ಸಂಸದ, ಹೀಗಿದ್ದೂ ವೇದಿಕೆಯಲ್ಲಿ ಪ್ರಧಾನಿ ಕಟೀಲ್ ರ ಹೆಸರು ಹೇಳದಿರುವುದು ಏಕೆ..? ಕಾರ್ಯಕರ್ತರು ಕಾರು ಅಲ್ಲಾಡಿಸಿದ ಪರಿಣಾಮವೇ? ನಳಿನ್ ವಿರೋಧಿ ಬಣದ ಅಭಿಯಾನಕ್ಕೆ ಸಿಕ್ಕ ಯಶಸ್ಸೇ.? ಸಂಸತ್ ಅಭ್ಯರ್ಥಿ ಮತ್ತು ರಾಜ್ಯಾಧ್ಯಕ್ಷರ ಬದಲಾವಣೆಯ ಸೂಚನೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು