5:52 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸೌಲಭ್ಯಗಳು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸರಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು: ಜಿಲ್ಲಾಧಿಕಾರಿ ಅಕ್ರಂ ಪಾಷ

13/12/2023, 21:17

ಕೋಲಾರ(reporterkarnataka.com): ಇಲಾಖೆಗಳಿಗೆ ನಿಗದಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುದಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಿಗದಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಸರ್ಕಾರದ ನಿರೀಕ್ಷೆಗಳಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಇಲಾಖೆಯ ಮುಖ್ಯಸ್ತರು ನಿಗಧಿಪಡಿಸಿರುವ ಗುರಿಯನ್ನು ಸಾಧಿಸಲು ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಪ್ರಸ್ತುತ 2023ನೇ ಸಾಲಿನ ನವೆಂಬರ್ ಅಂತ್ಯದ ವೇಳೆಗೆ ವಿವಿಧ ಇಲಾಖೆಗಳಿಂದ ನಿಗದಿಪಡಿಸಿರುವ ಗುರಿಗಳಿಗೆ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಗೆ ಒಟ್ಟು 16739.33 ಲಕ್ಷಗಳು ಹಂಚಿಕೆಯಾಗಿದ್ದು ಒಟ್ಟು
811.89 ಲಕ್ಷಗಳು ಬಿಡುಗಡೆಯಾಗಿರುತ್ತದೆ.
ಗಿರಿಜನ ಉಪ ಯೋಜನೆಯಡಿಯಲ್ಲಿ ಒಟ್ಟು 5018.94 ಲಕ್ಷಗಳು ಹಂಚಿಕೆಯಾಗಿದ್ದು, ಒಟ್ಟು 1553.51 ಲಕ್ಷಗಳು ಬಿಡುಗಡೆಯಾಗಿರುತ್ತದೆ. ಈ ಪೈಕಿ 2023 ನವೆಂಬರ್ ಅಂತ್ಯದ ವೇಳೆಗೆ ವಿಶೇಷ ಘಟಕ ಯೋಜನೆಯಡಿ ಶೇ.71 ಹಾಗೂ ಗಿರಿಜನ ಉಪಯೋಜನೆಯಡಿ ಶೇ.68 ಮೊತ್ತದ ಅನುದಾನ ವೆಚ್ಚ ಮಾಡಲಾಗಿದೆ. ಪ್ರಸ್ತುತ 3ನೇ ತ್ರೈಮಾಸಿಕದ ಅನುದಾನದ ಬಿಡುಗಡೆಯಾಗಿದ್ದು, ಶೀಘ್ರವಾಗಿ ಶೇ.100 ರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಮೂಲಕ ರಾಜ್ಯದ ಪ್ರಗತಿಯಲ್ಲಿ ಜಿಲ್ಲೆಯ ಸಾಧನೆಯು ಉನ್ನತ ಮಟ್ಟ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಕೃಷಿ ಜಂಟಿ ನಿರ್ದೇಶಕಿ ಸುಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಸೌಮ್ಯ ವರ್ಣಿಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ತೋಟಗಾರಿಕ ಉಪನಿರ್ದೇಶಕರಾದ ಕುಮಾರಸ್ವಾಮಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು