12:46 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಸೌಲಭ್ಯಗಳು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸರಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು: ಜಿಲ್ಲಾಧಿಕಾರಿ ಅಕ್ರಂ ಪಾಷ

13/12/2023, 21:17

ಕೋಲಾರ(reporterkarnataka.com): ಇಲಾಖೆಗಳಿಗೆ ನಿಗದಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುದಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಿಗದಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಸರ್ಕಾರದ ನಿರೀಕ್ಷೆಗಳಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಇಲಾಖೆಯ ಮುಖ್ಯಸ್ತರು ನಿಗಧಿಪಡಿಸಿರುವ ಗುರಿಯನ್ನು ಸಾಧಿಸಲು ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಪ್ರಸ್ತುತ 2023ನೇ ಸಾಲಿನ ನವೆಂಬರ್ ಅಂತ್ಯದ ವೇಳೆಗೆ ವಿವಿಧ ಇಲಾಖೆಗಳಿಂದ ನಿಗದಿಪಡಿಸಿರುವ ಗುರಿಗಳಿಗೆ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಗೆ ಒಟ್ಟು 16739.33 ಲಕ್ಷಗಳು ಹಂಚಿಕೆಯಾಗಿದ್ದು ಒಟ್ಟು
811.89 ಲಕ್ಷಗಳು ಬಿಡುಗಡೆಯಾಗಿರುತ್ತದೆ.
ಗಿರಿಜನ ಉಪ ಯೋಜನೆಯಡಿಯಲ್ಲಿ ಒಟ್ಟು 5018.94 ಲಕ್ಷಗಳು ಹಂಚಿಕೆಯಾಗಿದ್ದು, ಒಟ್ಟು 1553.51 ಲಕ್ಷಗಳು ಬಿಡುಗಡೆಯಾಗಿರುತ್ತದೆ. ಈ ಪೈಕಿ 2023 ನವೆಂಬರ್ ಅಂತ್ಯದ ವೇಳೆಗೆ ವಿಶೇಷ ಘಟಕ ಯೋಜನೆಯಡಿ ಶೇ.71 ಹಾಗೂ ಗಿರಿಜನ ಉಪಯೋಜನೆಯಡಿ ಶೇ.68 ಮೊತ್ತದ ಅನುದಾನ ವೆಚ್ಚ ಮಾಡಲಾಗಿದೆ. ಪ್ರಸ್ತುತ 3ನೇ ತ್ರೈಮಾಸಿಕದ ಅನುದಾನದ ಬಿಡುಗಡೆಯಾಗಿದ್ದು, ಶೀಘ್ರವಾಗಿ ಶೇ.100 ರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಮೂಲಕ ರಾಜ್ಯದ ಪ್ರಗತಿಯಲ್ಲಿ ಜಿಲ್ಲೆಯ ಸಾಧನೆಯು ಉನ್ನತ ಮಟ್ಟ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಕೃಷಿ ಜಂಟಿ ನಿರ್ದೇಶಕಿ ಸುಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಸೌಮ್ಯ ವರ್ಣಿಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ತೋಟಗಾರಿಕ ಉಪನಿರ್ದೇಶಕರಾದ ಕುಮಾರಸ್ವಾಮಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು