9:15 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸ್ಪಂದನಾ ಪಂಚಭೂತಗಳಲ್ಲಿ ಲೀನ: ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ; ಕಣ್ಣೀರ ವಿದಾಯ

09/08/2023, 17:12

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಥಾಯ್ಲೆಂಡ್‌ನಲ್ಲಿಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬುಧವಾರ ಹರಿಶ್ಚಂದ್ರ ಘಾಟ್‌ ನಲ್ಲಿ ಸಕಲ ವಿಧಿ ವಿಧಾನಗಳೊಂದಿಗೆ ನಡೆಯಿತು.
ಮಲ್ಲೇಶ್ವರಂ ನಲ್ಲಿರುವ ಸ್ಪಂದನಾ ಅವರ ತವರು ಮನೆಯಿಂದ ಪಾರ್ಥಿವ ಶರೀರವನ್ನು ಆ್ಯಂಬ್ಯುಲೆನ್ಸ್ ನಲ್ಲಿ ಇರಿಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಸಂಬಂಧಿಕರು ಮನೆಯಿಂದ ಅಂತಿಮ ಗೌರವ ಸಲ್ಲಿಸಿದರು. ನಂತರ ವಾಹನಗಳ ಮೆರವಣಿಗೆ ಮೂಲಕ ಹರಿಶ್ಚಂದ್ರ ಘಾಟ್ ಗೆ ಪಾರ್ಥಿವ ಶರೀರವನ್ನು ತರಲಾಯಿತು. ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಪುತ್ರ ಶೌರ್ಯ ಹಾಗೂ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದರು. ಸ್ಪಂದನಾ ಅವರ ಸಂಬಂಧಿಕರ ಹಾಗೂ ಅಭಿಮಾನಿಗಳ ಆಕ್ರಂಧನ ಮುಗಿಲು ಮುಟ್ಟಿತ್ತು.


ಸ್ಪಂದನಾ ಅವರು ಥಾಯ್ಲೆಂಡ್ ಪ್ರವಾಸದಲ್ಲಿರುವಾಗ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತವರು ಮನೆಗೆ ತರಲಾಯಿತು.
ಸ್ಪಂದನಾ ತವರು ಮನೆಯಾದ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಮ್ ಅವರ ನಿವಾಸದಲ್ಲೇ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಮಾಜಿ ಸಚಿವರಾದ ಉಮಾಶ್ರೀ, ಕುಮಾರ್ ಬಂಗಾರಪ್ಪ, ಚಿತ್ರನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪ್ರಿಯಾಂಕಾ ಉಪೇಂದ್ರ, ದೊಡ್ಡಣ್ಣ, ರಂಗಾಯಾಣ ರಘು, ಸೇರಿದಂತೆ ರಾಜಕೀಯ ರಂಗದ ಗಣ್ಯರು, ಚಿತ್ರರಂಗದ ಗಣ್ಯರು ಹಾಗೂ ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು