2:13 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ.

20/06/2021, 23:41

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು’ ಎಂಬ ಆನ್ಲೈನ್ ಕಾರ್ಯಾಗಾರ ಜರುಗಿತು. 
ರಾಜ್ಯ ಯುವ ಅಧಿಕಾರಿ ವೈ. ಎನ್. ಉಪಿನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉತ್ಸಾಹ ಕಳೆಗುಂದದೆ ಯಶಸ್ಸಿನೆಡೆಗೆ ಮುನ್ನಡೆಯುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜಕರಾದ ಡಾ. ನಾಗರತ್ನ ಕೆ. ಎ. ಮಾತನಾಡಿ, ಈ ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ  ವೃತ್ತಿಯಲ್ಲಿದ್ದರೆ ಯಶಸ್ಸು ಖಂಡಿತ ಎಂದರು.
ಸದಾ ಕ್ರಿಯಾಶೀಲರಾಗಿರುವುದರಿಂದ ಮನಸ್ಸು ಸಕಾರಾತ್ಮಕ ಚಿಂತನೆಗಳಿಂದ ಕೂಡಿರುತ್ತದೆ.  ಇತರರನ್ನು ಅಭಿವೃದ್ಧಿಯತ್ತ  ಪ್ರೇರೇಪಿಸಲು   ಸಹಕಾರಿಯಾಗುತ್ತದೆ. ಇದರಿಂದ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.


ಅಂತಾರಾಷ್ಟ್ರೀಯ ತರಬೇತುದಾರರಾದ ಡಾ.ಕಿಶೋರ್ ಶ್ರೀನಿವಾಸನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉತ್ಸಾಹದೊಂದಿಗೆ ಕ್ರಿಯಾಶೀಲತೆ ಇದ್ದರೆ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದಾಗಿ ತರಬೇತಿಯನ್ನು ನೀಡಿದರು. 


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಆಲ್ವಿನ್ ಸೆರಾವೊ  ಶುಭಕೋರಿದರು. ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಷನ್  ಸಾಂತುಮಯೋರ್ ಕಾರ್ಯಕ್ರಮ ರೂಪಿಸಿದರು.
ಪದುವ ಕಾಲೇಜಿನ  ಉಪನ್ಯಾಸಕಿ  ಝೀನಾ ಕಾರ್ಯಕ್ರಮ ನಿರೂಪಿಸಿದರು. IQAC ಅಧಿಕಾರಿ   ಮಿನೆಜಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು