4:29 PM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ.

20/06/2021, 23:41

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು’ ಎಂಬ ಆನ್ಲೈನ್ ಕಾರ್ಯಾಗಾರ ಜರುಗಿತು. 
ರಾಜ್ಯ ಯುವ ಅಧಿಕಾರಿ ವೈ. ಎನ್. ಉಪಿನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉತ್ಸಾಹ ಕಳೆಗುಂದದೆ ಯಶಸ್ಸಿನೆಡೆಗೆ ಮುನ್ನಡೆಯುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜಕರಾದ ಡಾ. ನಾಗರತ್ನ ಕೆ. ಎ. ಮಾತನಾಡಿ, ಈ ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ  ವೃತ್ತಿಯಲ್ಲಿದ್ದರೆ ಯಶಸ್ಸು ಖಂಡಿತ ಎಂದರು.
ಸದಾ ಕ್ರಿಯಾಶೀಲರಾಗಿರುವುದರಿಂದ ಮನಸ್ಸು ಸಕಾರಾತ್ಮಕ ಚಿಂತನೆಗಳಿಂದ ಕೂಡಿರುತ್ತದೆ.  ಇತರರನ್ನು ಅಭಿವೃದ್ಧಿಯತ್ತ  ಪ್ರೇರೇಪಿಸಲು   ಸಹಕಾರಿಯಾಗುತ್ತದೆ. ಇದರಿಂದ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.


ಅಂತಾರಾಷ್ಟ್ರೀಯ ತರಬೇತುದಾರರಾದ ಡಾ.ಕಿಶೋರ್ ಶ್ರೀನಿವಾಸನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉತ್ಸಾಹದೊಂದಿಗೆ ಕ್ರಿಯಾಶೀಲತೆ ಇದ್ದರೆ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದಾಗಿ ತರಬೇತಿಯನ್ನು ನೀಡಿದರು. 


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಆಲ್ವಿನ್ ಸೆರಾವೊ  ಶುಭಕೋರಿದರು. ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಷನ್  ಸಾಂತುಮಯೋರ್ ಕಾರ್ಯಕ್ರಮ ರೂಪಿಸಿದರು.
ಪದುವ ಕಾಲೇಜಿನ  ಉಪನ್ಯಾಸಕಿ  ಝೀನಾ ಕಾರ್ಯಕ್ರಮ ನಿರೂಪಿಸಿದರು. IQAC ಅಧಿಕಾರಿ   ಮಿನೆಜಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು