11:48 AM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ.

20/06/2021, 23:41

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು’ ಎಂಬ ಆನ್ಲೈನ್ ಕಾರ್ಯಾಗಾರ ಜರುಗಿತು. 
ರಾಜ್ಯ ಯುವ ಅಧಿಕಾರಿ ವೈ. ಎನ್. ಉಪಿನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉತ್ಸಾಹ ಕಳೆಗುಂದದೆ ಯಶಸ್ಸಿನೆಡೆಗೆ ಮುನ್ನಡೆಯುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜಕರಾದ ಡಾ. ನಾಗರತ್ನ ಕೆ. ಎ. ಮಾತನಾಡಿ, ಈ ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ  ವೃತ್ತಿಯಲ್ಲಿದ್ದರೆ ಯಶಸ್ಸು ಖಂಡಿತ ಎಂದರು.
ಸದಾ ಕ್ರಿಯಾಶೀಲರಾಗಿರುವುದರಿಂದ ಮನಸ್ಸು ಸಕಾರಾತ್ಮಕ ಚಿಂತನೆಗಳಿಂದ ಕೂಡಿರುತ್ತದೆ.  ಇತರರನ್ನು ಅಭಿವೃದ್ಧಿಯತ್ತ  ಪ್ರೇರೇಪಿಸಲು   ಸಹಕಾರಿಯಾಗುತ್ತದೆ. ಇದರಿಂದ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.


ಅಂತಾರಾಷ್ಟ್ರೀಯ ತರಬೇತುದಾರರಾದ ಡಾ.ಕಿಶೋರ್ ಶ್ರೀನಿವಾಸನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉತ್ಸಾಹದೊಂದಿಗೆ ಕ್ರಿಯಾಶೀಲತೆ ಇದ್ದರೆ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದಾಗಿ ತರಬೇತಿಯನ್ನು ನೀಡಿದರು. 


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಆಲ್ವಿನ್ ಸೆರಾವೊ  ಶುಭಕೋರಿದರು. ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಷನ್  ಸಾಂತುಮಯೋರ್ ಕಾರ್ಯಕ್ರಮ ರೂಪಿಸಿದರು.
ಪದುವ ಕಾಲೇಜಿನ  ಉಪನ್ಯಾಸಕಿ  ಝೀನಾ ಕಾರ್ಯಕ್ರಮ ನಿರೂಪಿಸಿದರು. IQAC ಅಧಿಕಾರಿ   ಮಿನೆಜಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು