7:47 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್ ಖಾದರ್ ಏನು ಹೇಳಿದ್ರು?

29/03/2025, 10:27

ಬೆಂಗಳೂರು(reporterkarnataka.com): ವಿಧಾನ ಸೌಧಕ್ಕೆ ನೂತನವಾಗಿ ಅಳವಡಿಸಿರುವ ಆಕರ್ಷಣೆಯ ವರ್ಣರಂಜಿತ ದೀಪಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿದ್ದತೆ ನಡೆದಿದೆ.

*ಸ್ಪೀಕರ್ ಯು.ಟಿ. ಖಾದರ್ ಏನು ಹೇಳಿದ್ರು?*

ವಿಧಾನಸೌದ ಪ್ರಜಾಪ್ರಭುತ್ವದ ದೇಗುಲ.ಅಂತಾರಾಷ್ಟ್ರೀಯ ಮಟ್ಟದಲ್ಲೂ ಆಕರ್ಷಣೆಯ ಕೇಂದ್ರ ಆಗಿದೆ. ಆಡಳಿತ ಸೌಧಕ್ಕೆ ಜನಾಕರ್ಷಣೆ‌ ಮಾಡುವ ಗುರಿಯಿಂದ ಸರ್ಕಾರಕ್ಕೆ ಮನವಿ ಮಾಡಿದ್ದೆ.
ಶನಿವಾರ, ಭಾನುವಾರ ಬೆಳಗಾವಿಯಲ್ಲಿ ದೀಪಾಲಂಕಾರ ಆಕರ್ಷಣೆ ಆಗ್ತಿದೆ. ಈಗ ವಿಧಾನಸೌಧದಲ್ಲಿ ಅದೇ ರೀತಿ ಮಾಡಲಾಗ್ತಿದೆ.
ಸಂಜೆ 6 ಗಂಟೆಯಿಂದ 10 ಗಂಟೆವರೆಗೆ ದೀಪಾಲಂಕಾರ ಇರುತ್ತದೆ. ವಿಶೇಷ ದಿನಗಳಲ್ಲಿ ಲೈಟ್ ಹಾಕೊದಕ್ಕೆ ಹೆಚ್ಚು ಹಣ ಖರ್ಚಾಗುತ್ತಿತ್ತು. ಈಗ ಪರ್ಮನೆಂಟ್ ಆಗಿದೆ‌. ಎಲ್ ಇ ಡಿ ಲೈಟ್ ಬಳಕೆಯಾಗಿದೆ.
ಏ. 6ರಂದು ಸಿಎಂ ಉದ್ಘಾಟನೆ ಮಾಡ್ತಾರೆ. ಶನಿವಾರ ಭಾನುವಾರ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕೊಡೊದಕ್ಕೆ ಮನವಿ ಮಾಡಿದ್ದೇವೆ. ಇದರ ಬಗ್ಗೆ ಚೀಫ್ ಸೆಕ್ರೆಟರಿ ಜೊತೆ ಚರ್ಚೆ ಮಾಡ್ತಿನಿ. 6ರಂದು ಸಾರ್ವಜನಿಕರಿಗೆ ಅವಕಾಶ ಕೊಡ್ತಿವಿ.


ಭಾನುವಾರ ಪೊಲೀಸ್ ಬ್ಯಾಂಡ್ ಒಂದೊಂದು ದಿನ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತೆ.
ಸಾರ್ವಜನಿಕರ ವಿಧಾನಸೌದ ಪ್ರವೇಶ ಹಾಗೂ ಭದ್ರತೆ ವಿಚಾರವಾಗಿ ಸರ್ಕಾರಕ್ಕೆ ಸಲಹೆ ಸೂಚನೆ ಕೊಟ್ಟಿದ್ದೇನೆ.
ಬ್ಯಾಗ್ ಜೊತೆ ಬರಬಾರದು, ಆಧಾರ್ ಕಾರ್ಡ್ ತರುವಂತೆ ಜಾಗೃತಿ ಮೂಡಿಸಬೇಕು.
ಬ್ಯಾರಿಕೇಡ್ ಹಾಕಿ ವ್ಯವಸ್ಥೆ ಮಾಡಬೇಕು. ಬಂದೋಬಸ್ತ್ ಮಾಡೋದು ನಮ್ಮ ಕರ್ತವ್ಯ
ಸಿಎಂ ಇದಕ್ಕೆ ಒಪ್ಪಿಗೆ ಕೊಡ್ತಾರೆ ಎಂಬ ಭರವಸೆ ಇದೆ.ಶನಿವಾರ ಬಾನುವಾರ ಲೈಟಿಂಗ್ ವ್ಯವಸ್ಥೆ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು