8:04 PM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್

29/05/2026, 08:57

ಜೈಪುರ(reporterkarnataka.com): ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.
ದೆಹಲಿ ಸುತ್ತಮುತ್ತ ಭಾರಿ ಗಾಳಿ ಮತ್ತು ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಎಟಿಎಸ್‌ ಸೂಚನೆಯ ಮೇರೆಗೆ ಸಿಎಂ ಇದ್ದ ವಿಮಾನದ ಮಾರ್ಗವನ್ನು ಜೈಪುರದತ್ತ ಬದಲಾಯಿಸಿ ಅಲ್ಲಿ ಇಳಿಸಲಾಗಿದೆ. ಜೈಪುರದಿಂದ ದೆಹಲಿಗೆ ವಿಮಾನವು ಮರಳಿ ಪ್ರಯಾಣ ಬೆಳೆಸಲು ಕನಿಷ್ಠ ಇನ್ನೂ ಒಂದು ಗಂಟೆಗೂ ಅಧಿಕ ಸಮಯ ಬೇಕಾಗಬಹುದು ಎಂದು ವರದಿಯಾಗಿದೆ.

*ವಿಮಾನದಲ್ಲಿದ್ದ ಪ್ರಮುಖ ನಾಯಕರು:*
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖರು ಮತ್ತು ರಾಜ್ಯದ ಸಚಿವರ ದೊಡ್ಡ ದಂಡೇ ಈ ವಿಶೇಷ ವಿಮಾನದಲ್ಲಿದೆ. ರಣದೀಪ್ ಸಿಂಗ್ ಸುರ್ಜೇವಾಲಾ (ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ), ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಎ.ಎಸ್. ಪೊನ್ನಣ್ಣ, ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅಭಿಷೇಕ್ ದತ್ ವಿಮಾನದಲ್ಲಿದ್ದರು.
ಸದ್ಯ ಜೈಪುರದಲ್ಲೇ ಸಿಎಂ ಮತ್ತು ನಾಯಕರ ತಂಡ ಹವಾಮಾನ ತಿಳಿಯಾಗುವವರೆಗೆ ಕಾಯುತ್ತಿದ್ದು, ದೆಹಲಿಯಲ್ಲಿ ವಾತಾವರಣ ಸುಧಾರಿಸಿದ ತಕ್ಷಣವೇ ಜೈಪುರದಿಂದ ದೆಹಲಿಯತ್ತ ವಿಶೇಷ ವಿಮಾನವು ಹಾರಾಟ ನಡೆಸಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು