11:13 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

24/05/2025, 09:00

* ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಡಿಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ.

* ಕಾವೇರಿ ಪರಂಪರೆ, ಜಲ ಶ್ರೀಮಂತಿಕೆಯನ್ನೊಳಗೊಂಡ ಗೀತ ಸಾಹಿತ್ಯ ರಚನೆಗೆ ಮನವಿ

* ಕಾವೇರಿ ಆರತಿ ಸಂದರ್ಭದಲ್ಲಿ ಆಯ್ಕೆಯಾದ ಹಾಡು ಪ್ರಸಾರ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು(reporterkarnataka.com): ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.
ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ, ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆಯೂ, ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು