7:04 PM Friday28 - November 2025
ಬ್ರೇಕಿಂಗ್ ನ್ಯೂಸ್
Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

Sports | ಚೆಸ್: ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

28/11/2025, 18:54

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail com

ಬೆಂಗಳೂರಿನಲ್ಲಿ ನಡೆದ ಬಾಲ-ಬಾಲಕಿಯರ ಕರ್ನಾಟಕ ಸ್ಟೇಟ್ ಚೆಸ್ ಚಾಂಪಿಯನ್ ಷಿಪ್ 2025-26 ಪಂದ್ಯಾವಳಿಯಲ್ಲಿ ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ (ದ್ವಿತೀಯ ಪಿಯು ವಿಜ್ಞಾನ ವಿಭಾಗ) ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತ ಬೆಟ್ಟಮಕ್ಕಿ ನಿವಾಸಿಗಳಾದ ಸುಮನಾ ಮತ್ತು ಅಶೋಕ ದಂಪತಿಯ ಪುತ್ರ.ಶಿಕ್ಷಕ ದಂಪತಿಯ ಮಗನಾದ ಈತ ಓದಿನಲ್ಲಿಯೂ ಅತ್ಯಂತ ಪ್ರತಿಭಾನ್ವಿತ, ನಿರಂತರ 12 ವರ್ಷಗಳಿಂದ ಚೆಸ್ ಆಟವನ್ನು ಅತ್ಯಂತ ಆಸಕ್ತಿಯಿಂದ ಆಡುತ್ತಾ ಬಂದಿದ್ದು, SGFI ( ಸ್ಕೂಲ್ ಗೇಮ್ ಫೆಡರೇಷನ್ ಅಫ್ ಇಂಡಿಯಾ) ನಲ್ಲಿ ಸತತ ಎರಡನೆಯ ಬಾರಿಗೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿದ್ದಾನೆ. ಈ ವರ್ಷ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ತೆರಳುತ್ತಿದ್ದಾನೆ.
ವಿದ್ಯಾರ್ಥಿಯ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕವೃಂದ ಮತ್ತು ಪೋಷಕರು ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನವನ್ನು ಪಡೆದುಕೊಳ್ಳಲಿ ಎಂದು ಶುಭಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು