3:10 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Sports | ಚೆಸ್: ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

28/11/2025, 18:54

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail com

ಬೆಂಗಳೂರಿನಲ್ಲಿ ನಡೆದ ಬಾಲ-ಬಾಲಕಿಯರ ಕರ್ನಾಟಕ ಸ್ಟೇಟ್ ಚೆಸ್ ಚಾಂಪಿಯನ್ ಷಿಪ್ 2025-26 ಪಂದ್ಯಾವಳಿಯಲ್ಲಿ ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ (ದ್ವಿತೀಯ ಪಿಯು ವಿಜ್ಞಾನ ವಿಭಾಗ) ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತ ಬೆಟ್ಟಮಕ್ಕಿ ನಿವಾಸಿಗಳಾದ ಸುಮನಾ ಮತ್ತು ಅಶೋಕ ದಂಪತಿಯ ಪುತ್ರ.ಶಿಕ್ಷಕ ದಂಪತಿಯ ಮಗನಾದ ಈತ ಓದಿನಲ್ಲಿಯೂ ಅತ್ಯಂತ ಪ್ರತಿಭಾನ್ವಿತ, ನಿರಂತರ 12 ವರ್ಷಗಳಿಂದ ಚೆಸ್ ಆಟವನ್ನು ಅತ್ಯಂತ ಆಸಕ್ತಿಯಿಂದ ಆಡುತ್ತಾ ಬಂದಿದ್ದು, SGFI ( ಸ್ಕೂಲ್ ಗೇಮ್ ಫೆಡರೇಷನ್ ಅಫ್ ಇಂಡಿಯಾ) ನಲ್ಲಿ ಸತತ ಎರಡನೆಯ ಬಾರಿಗೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿದ್ದಾನೆ. ಈ ವರ್ಷ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ತೆರಳುತ್ತಿದ್ದಾನೆ.
ವಿದ್ಯಾರ್ಥಿಯ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕವೃಂದ ಮತ್ತು ಪೋಷಕರು ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನವನ್ನು ಪಡೆದುಕೊಳ್ಳಲಿ ಎಂದು ಶುಭಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು