5:07 AM Tuesday19 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ… ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ…

ಇತ್ತೀಚಿನ ಸುದ್ದಿ

Sports & Cultural Fest | ಚಿತ್ರದುರ್ಗ ಎಸ್ ಜೆಎಂ ಪಾಲಿಟಿಕ್ ನಲ್ಲಿ ಪಾಲಿಫೆಸ್ಟ್- 2025 ಸಮಾರೋಪ

28/03/2025, 20:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ನಮ್ಮನ್ನ ಬಾಹ್ಯ ಪ್ರಪಂಚದ ಆಡಂಬರದ ಜೀವನ ಪದ್ಧತಿಗೆ ಈಡು ಮಾಡಿಕೊಂಡು ಅಂತರಂಗದ ಅರಿವಿನ ಜಾಗೃತಿ ಉದ್ದೀಪನಗೊಳಿಸಿಕೊಳ್ಳುವಲ್ಲಿ ವಿಫಲರಾಗುತ್ತಿರುವುದು ಆಧುನಿಕ ಜಗತ್ತಿನ ವಿಪರ್ಯಾಸಗಳಲ್ಲೊಂದು. ಮೊಬೈಲ್ ಎನ್ನುವ ಸಾಧನ ನಮ್ಮನ್ನ ಆಳುವುದರ ಜೊತೆಗೆ ಮರಳುಗೊಳಿಸಿ ನಮ್ಮಗಳ ವ್ಯಕ್ತಿತ್ವದ ಕ್ರಿಯಾಶೀಲತೆಯನ್ನು ಕಸಿದುಕೊಂಡು ಜಡತ್ವಕ್ಕೆ ತಳ್ಳಿರುವುದು ಆರೋಗ್ಯಕರ ಸಮಾಜದ ಬೆಳವಣಿಗೆಗೆ ಪೂರಕವಾದುದಲ್ಲ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆ ಎಂ ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಮಹಾಸ್ವಾಮಿಗಳು ವಿಷಾದ ವ್ಯಕ್ತಪಡಿಸಿದರು.
ಅವರು ನಗರದ ಎಸ್ ಜೆಎಂ ಪಾಲಿಟಿಕ್ ನಲ್ಲಿ ಏರ್ಪಡಿಸಿದ್ದ 2024 -25ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಪಾಲಿಫೆಸ್ಟ್- 2025ರ ಸಾನಿಧ್ಯ ವಹಿಸಿ ಮಾತನಾಡುತ್ತಾ ಬೌದ್ಧಿಕ, ಭೌತಿಕ ಬೆಳವಣಿಗೆಗೆ ಬೇಕಾದ ಆರೋಗ್ಯಕರ ಅಭಿರುಚಿಗಳನ್ನು ರೂಡಿಸಿಕೊಳ್ಳುವತ್ತ ವಿದ್ಯಾರ್ಥಿಗಳ ಗಮನ ಕೇಂದ್ರೀಕೃತವಾಗಬೇಕಿದೆ. ನಮ್ಮ ಜೀವನ ಕ್ರೀಡಾ ಮಾದರಿಯಲ್ಲಿರಬೇಕು. ಕ್ರೀಡೆ ವ್ಯಕ್ತಿತ್ವ ರೂಪಿಸುವ ಜತೆಗೆ ಏಕಾಗ್ರತೆಯನ್ನು ತಂದುಕೊಡುತ್ತದೆ. ನಾವು ಈಗ ಕ್ರೀಡೆಗಳಿಂದ ವಿಮುಖರಾಗುತ್ತಿದ್ದೇವೆ. ಕಳೆದೆರಡು ದಶಕಗಳಲ್ಲಿ ಎಲ್ಲಾ ಆಟದ ಮೈದಾನಗಳು ಬಣಗುಡುತ್ತಿವೆ. ಹಿಂದೆ ಎಲ್ಲಾ ಮೈದಾನಗಳು ಆಟಗಾರರಿಂದ ತುಂಬಿ ತುಳುಕುತ್ತಿದ್ದವು. ಪಠ್ಯದ ಜೊತೆಗೆ ಕಲೆ,ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳತ್ತ, ಮೌಲ್ಯಯುತ ಚಿಂತನೆಗಳ ಗ್ರಂಥಾಧ್ಯಯನ ಮಾನಸಿಕ ಬೆಳವಣಿಗೆ ಪ್ರೇರಕ ಶಕ್ತಿಯಾಗಬಲ್ಲವಾಗಿವೆ. ಆಧುನಿಕತೆಗೆ ಒಗ್ಗಿಕೊಂಡಂತೆಲ್ಲಾ ಮಾನವೀಯತೆ, ಮನುಷ್ಯತ್ವ ನಮ್ಮಿಂದ ದೂರವಾಗಿ ದ್ವೇಷ, ಅಸೂಯೆ ತುಂಬಿ ತುಳುಕುತ್ತಿದೆ .ಒಳ್ಳೆಯ ಹವ್ಯಾಸಗಳು ನಮ್ಮಿಂದ ದೂರವಾಗುತ್ತಿವೆ. ತಂದೆ ತಾಯಿಗಳು ನಮ್ಮ ಮಕ್ಕಳು ಚೆನ್ನಾಗಿ ಓದಿ ಅದ್ಯಯನಶೀಲರಾಗಿ ,ಒಳ್ಳೆಯ ಹೆಸರು ಮತ್ತು ಉದ್ಯೋಗವನ್ನು ಪಡೆಯಲಿ ಎಂಬ ಸದಿಚ್ಛೆಯಿಂದ ತಮ್ಮ ಬದುಕನ್ನೇ ತ್ಯಾಗ ಮಾಡಿ ಮಕ್ಕಳ ಹಿತಕ್ಕೆ ಅವರ ಕೊಡುಗೆ ಅಪಾರ. ಅಂಥವರ ತ್ಯಾಗವನ್ನು ನಿಷ್ಪ್ರಯೋಜಕ ಮಾಡದೆ, ಅವರ ಋಣವನ್ನು ತೀರಿಸುವ ಕರ್ತವ್ಯ ಪ್ರತಿಯೊಬ್ಬ.ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ.
ಅನೇಕರು ಬಡತನದಲ್ಲಿ ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚಿ, ಕಷ್ಟಪಟ್ಟು ಓದಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಅಧಿಕಾರವನ್ನು ಪಡೆದಿರುತ್ತಾರೆ. ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವೂ ಅವರಿಗೆ ಸಿಕ್ಕಿರುತ್ತದೆ. ಅಂತಹವರು ಭ್ರಷ್ಟತನಕ್ಕೆ ಹೊಂದಿಕೊಳ್ಳಲಿಲ್ಲ, ಎಂಬ ಕಾರಣದಿಂದ ವಿನಾ ಕಾರಣ ಅವರ ಮೇಲೆ ಸುಳ್ಳು ವಂಚನೆಯ ಆರೋಪ ಹೊರಿಸಿ ಅವರು ಈ ಬದುಕಿನಿಂದ ದೂರವಾಗುವಂತಹ, ಆತ್ಮಹತ್ಯೆ ಮಾಡಿಕೊಳ್ಳುವಂತಹ ಹಂತಕ್ಕೆ ಇಂದಿನ ಕೆಲವರು ಕುಮ್ಮಕ್ಕು ನೀಡುತ್ತಿರುವುದು, ಅವರು ಸತ್ತನಂತರ ಅವರ ಗುಣಗಾನ ಮಾಡುವುದು ಎಂಥ ವಿಪರ್ಯಾಸ.
ನಮ್ಮ ಚಿತ್ರದುರ್ಗದ ಬೃಹನ್ಮಠದ ಜಯದೇವ ಜಗದ್ಗುರುಗಳು ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಪ್ರಸಾದ ನಿಲಯಗಳನ್ನು ಸ್ಥಾಪನೆ ಮಾಡುವುದರ ಮೂಲಕ ವಿದ್ಯಾರ್ಥಿಗಳ ಆಶಾಕಿರಣವಾಗಿದ್ದರು. ಅದರಂತೆ ಮಧ್ಯ ಕರ್ನಾಟಕದ ಈ ಬಯಲು ಸೀಮೆಯಲ್ಲಿ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳವರು lವಿದ್ಯಾಪೀಠದ ವತಿಯಿಂದ ಶಾಲಾಕಾಲೇಜು ಸ್ಥಾಪಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಕಾರಣರಾದರು ಎಂದು ಸ್ಮರಿಸಿದ ಅವರು ತ್ರಿವಿಧ ದಾಸೋಹಕ್ಕೆ ಹೆಸರಾದ ಬೃಹನ್ಮಠದ ಮೂಲಕ ಓದಿದ ಅನೇಕರು ಮಹಾನ್ ಸಾಧಕರಾಗಿದ್ದಾರೆ. ಅವರೆಲ್ಲರೂ ಈಗಿನ ವಿದ್ಯಾರ್ಥಿ ಸಮೂಹಕ್ಕೆ ಪ್ರೇರಣೆಯಾಗಲಿ ಎಂದು ನುಡಿದರು.
ಸಮಾರಂಭದ ಮುಖ್ಯ ಅತಿಥಿಗಳಾಗಿದ್ದ ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನೆಯ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್ ಗುರುಬಸವರಾಜ್ ಬಿ.ಎನ್. ಅವರು ಮಾತನಾಡಿ ನಾನು ಸಹ ನಿಮ್ಮಂತೆ 2000 ಇಸವಿಯಲ್ಲಿ ಸಿವಿಲ್ ವಿಭಾಗದ ವಿದ್ಯಾರ್ಥಿಯಾಗಿದ್ದೆ. ಕಡೆಯ ಸೆಮಿಸ್ಟರ್ ಬರುವಷ್ಟರಲ್ಲಿ ಉದ್ಯೋಗ ಖಾತ್ರಿಯಾಗಿ ಪ್ರಥಮ ದರ್ಜೆ ಗುತ್ತಿಗೆದಾರರ ಬಳಿ ಫಲಿತಾಂಶ ಬರುವ ಮುನ್ನವೇ ಕೆಲಸ ಸಿಕ್ಕಿತ್ತು . ಆಗ ಚಿತ್ರದುರ್ಗ ನಗರದ ಬೆಂಗಳೂರು ರಸ್ತೆಯ ಕಾರಾಗೃಹ, ಐಯುಡಿಪಿ ಬಡಾವಣೆಯ ಪ್ರಗತಿ ಗ್ರಾಮೀಣ ಬ್ಯಾಂಕ್ ಕಟ್ಟಡ, ಮೈಸೂರು ಅರ್ಕ್ಯಲಾಜಿಕಲ್ ಸರ್ವೆ ಕಟ್ಟಡ, ದಾವಣಗೆರೆ ರೈಲ್ವೆ ನಿಲ್ದಾಣ ಮತ್ತು ವಸತಿಗೃಹ ಕಟ್ಟಡಗಳನ್ನು ಕಟ್ಟಿದ ಸಾರ್ಥಕತೆ ನನಗಿದೆ.ನಂತರ ಬೆಂಗಳೂರಿನ ಸ್ನೇಹಿತರ ಕರೆಯ ಮೇರೆಗೆ ಅಲ್ಲಿಗೆ ಹೋಗಿ, ಕೆಲಸದ ನಡುವೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕಟ್ಟಿ ಪಾಸು ಮಾಡಿದೆ. ನಂತರ ಇದೀಗ ಸರ್ಕಾರದ ಉದ್ಯೋಗ, ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ. ಡಿಪ್ಲೋಮೋ ಅಂದರೆ ಉದ್ಯೋಗ ಸಿಗುವುದಿಲ್ಲ ಎನ್ನುವ ಕೀಳರಿಮೆ ಬೇಡ, ಓದುವಾಗ ಶ್ರದ್ಧೆ ವಹಿಸಿದರೆ ಎಲ್ಲವೂ ಸಾಧ್ಯವಿದೆ ಎನ್ನುವುದಕ್ಕೆ ನಾನೇ ನಿಮ್ಮ ಮುಂದೆ ಇದ್ದೇನೆ. ನನಗೆ ಈ ಕೆಲಸ ಸಂತೃಪ್ತಿ ಕೊಟ್ಟಿದೆ ಎಂದು ತಮ್ಮ ಬದುಕಿನ ನಾನಾ ಘಟನೆಗಳನ್ನು ವಿದ್ಯಾರ್ಥಿಗಳ ಮುಂದೆ ಇಟ್ಟರು.
ಸಮಾರಂಭದ ಮತ್ತೋರ್ವ ಅತಿಥಿಗಳಾಗಿದ್ದ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಪಿ.ಬಿ .ಭರತ್ ಮಾತನಾಡಿ ಶಿಕ್ಷಣ ಅಂದರೆ ನಾವು ಮೂರ್ತಿಯಾಗುವ ಮಾಧ್ಯಮ ಎಂದರ್ಥ. ನಾವು ಯಾವುದೇ ಕ್ಷೇತ್ರದಲ್ಲಿದ್ದರೂ ಅಲ್ಲಿ ಅಡೆತಡೆಗಳು ಇದ್ದೇ ಇರುತ್ತದೆ. ಅವನ್ನ ಮೆಟ್ಟಿ ನಿಲ್ಲುವ ಜಾಣ್ಮೆ ಕರಗತ ಮಾಡಿಕೊಂಡಾಗ ಯಶಸ್ಸು ಸಿಗುತ್ತದೆ. ಎಲ್ಲರೂ ಸಹ ನೂರಕ್ಕೆ ನೂರು ಯಶಸ್ವಿ ವ್ಯಕ್ತಿಗಳಾ ಇಮಗಿರುವುದಿಲ್ಲ. ಎಲ್ಲರ ಬದುಕಿನಲ್ಲಿ ಒಂದಲ್ಲ ಒಂದು ರೀತಿಯ ಕೊರತೆಗಳು ಇದ್ದೇ ಇರುತ್ತವೆ. ಅವುಗಳನ್ನ ಸರಿಪಡಿಸಿಕೊಂಡು ಹೋದಾಗ ಎಲ್ಲವೂ ಸಾಧ್ಯವಾಗುತ್ತದೆ ಎಂದ ಅವರು ಇದೇ ಎಸ್ ಜೆ ಎಂ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮೋ ಮುಗಿಸಿ,ಚನ್ನಾಗಿ ಓದಿ, ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗುರು ಬಸವರಾಜರನ್ನೇ ಆದರ್ಶ ವ್ಯಕ್ತಿಯಾಗಿ ಸ್ವೀಕರಿಸಬೇಕೆಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್ .ವಿ . ರವಿಶಂಕರ್ ವಹಿಸಿ ಕಾಲೇಜಿನ ಬೆಳವಣಿಗೆಯ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಮತ್ತು ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಪಾರಿತೋಷಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಲಾಯಿತು.
ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಹಮೀದ್ ರಜಾಕ್ ಖಾನ್ ಅವರಿಂದ ಸ್ವಾಗತ,ವಿಭಾಗದ ಮುಖ್ಯಸ್ಥ ಪಿ.ಬಿ.ರಾಜೇಶ್ ವಾರ್ಷಿಕ ವರದಿ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು