2:51 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

18/04/2024, 16:36

ಸಂತೋಷ್ ಅತ್ತಿಗರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ. 90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟುb4*100 ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ‘ಪಿಯುಸಿ ನಂತರ ಬಿಬಿಎ, ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು