9:48 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

18/04/2024, 16:36

ಸಂತೋಷ್ ಅತ್ತಿಗರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ. 90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟುb4*100 ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ‘ಪಿಯುಸಿ ನಂತರ ಬಿಬಿಎ, ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು