1:22 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

18/04/2024, 16:36

ಸಂತೋಷ್ ಅತ್ತಿಗರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ. 90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟುb4*100 ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ‘ಪಿಯುಸಿ ನಂತರ ಬಿಬಿಎ, ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು